Advertisement

ಎಸ್ಸಿ, ಎಸ್ಟಿ ಕಲ್ಯಾಣಕ್ಕೆ ಬಜೆಟ್‌ನಲ್ಲಿ ಬಂಪರ್‌: ಸಿಎಂ

07:30 AM Feb 13, 2018 | Team Udayavani |

ದೇವದುರ್ಗ (ರಾಯಚೂರು): ಮುಂಬರುವ ದಿನಗಳಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳ ಕಲ್ಯಾಣಕ್ಕಾಗಿ ಬಜೆಟ್‌ನಲ್ಲಿ 30 ಸಾವಿರ ಕೋಟಿ ರೂ.ಅನುದಾನ ಒದಗಿಸುವ ಉದ್ದೇಶ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement

ಪಟ್ಟಣದಲ್ಲಿ ಸೋಮವಾರ ಜನಾಶೀರ್ವಾದ ಯಾತ್ರೆ ಮತ್ತು ಬುಡಕಟ್ಟು ಜನಾಂಗಗಳ ಸಮಾವೇಶದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಅನೇಕ ಭಾಗ್ಯ ಕಾರ್ಯಕ್ರಮಗಳ ಮೂಲಕ ಎಲ್ಲ ಸಮುದಾಯಗಳ ಜನರಿಗೆ ಸರ್ಕಾರದ ಸವಲತ್ತು ತಲುಪಿಸುವ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಕಾಮಗಾರಿಗಳ ಗುತ್ತಿಗೆ ನೀಡುವಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳ ಗುತ್ತಿಗೆದಾರರಿಗೆ ಮೀಸಲಾತಿ, ಕೈಗಾರಿಕೆ ಪ್ರಾರಂಭಿಸುವ ಯುವಕರಿಗೆ ಶೇ.4ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ, ನಿವೇಶನ ಒದಗಿಸುವ ಮೂಲಕ
ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡಲಾಗಿದೆ ಎಂದರು.

ಇದೇ ವೇಳೆ, ಬಿಜೆಪಿ ವಿರುದ್ಧ ಹರಿಹಾಯ್ದ ಅವರು, ಅಧಿಕಾರದಲ್ಲಿದ್ದಾಗ ಏನೂ ಮಾಡದ ಬಿಜೆಪಿಯವರಿಗೆ ಚುನಾವಣೆ ಬಂದಾಗಲೆಲ್ಲಾ ದಲಿತರು ನೆನಪಾಗ್ತಾರೆ. ಈ ಬಾರಿ ಸ್ಲಂ ವಾಸ್ತವ್ಯ ಎಂಬ ಹೊಸ ನಾಟಕ ಪ್ರಾರಂಭಿಸಿದ್ದಾರೆ. ಮೋಸಗಾರರು, ಸುಳ್ಳುಗಾರರು,
ಭ್ರಷ್ಟಾಚಾರಿಗಳಿಗೆ ರಾಜ್ಯದ ಜನತೆ ಯಾವತ್ತೂ ಮತ ಹಾಕಬಾರದು ಎಂದು ಕರೆ ನೀಡಿದರು. 

Advertisement

Udayavani is now on Telegram. Click here to join our channel and stay updated with the latest news.

Next