Advertisement

ಪುಣೆ ಬಂಟರ ಸಂಘ: ವಿಶ್ವ ಬಂಟರ ಸಮ್ಮಿಲನ ಆಮಂತ್ರಣ ಪತ್ರಿಕೆ ಬಿಡುಗಡೆ

04:14 PM Sep 06, 2018 | |

ಪುಣೆ: ಬಾರ್ಕೂರು ಮಹಾಸಂಸ್ಥಾನದ ವಿದ್ಯಾವಾಚಸ್ಪತಿ  ಡಾ| ವಿಶ್ವ ಸಂತೋಷ ಭಾರತಿ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಪುಣೆ ಬಂಟರ ಸಂಘದ ಸಾಂಸ್ಕೃತಿಕ ಸಮಿತಿ ಆಶ್ರಯದಲ್ಲಿ ಆಶ್ರಯದಲ್ಲಿ  ಸೆ. 3 ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನ, ಬಾಣೇರ್‌ ಪುಣೆ ಇಲ್ಲಿ ಲತಾ ಸುಧೀರ್‌ ಶೆಟ್ಟಿ ವೇದಿಕೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಜರಗಿತು.

Advertisement

ಈ ಸಂದರ್ಭದಲ್ಲಿ  ಸೆ. 9 ರಂದು ಜಾಗತಿಕ ಬಂಟರ ಸಂಘಗಳ ಒಕ್ಕೊಟದ ವತಿಯಿಂದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿಯವರ  ನೇತೃತ್ವದಲ್ಲಿ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾ ಭವನದ ತೋನ್ಸೆ ಶಶಿರೇಖಾ ಆನಂದ್‌ ಶೆಟ್ಟಿ ವೇದಿಕೆಯಲ್ಲಿ  ಜರಗಲಿರುವ ವಿಶ್ವ ಬಂಟರ ಸಮ್ಮಿಲನ -2018 ರ ಆಮಂತ್ರಣ ಪತ್ರಿಕೆಯನ್ನು ಡಾ| ವಿಶ್ವ ಸಂತೋಷ ಭಾರತಿ ಶ್ರೀಪಾದರು ಬಿಡುಗಡೆಗೊಳಿಸಿದರು. ಈ ಸಂದರ್ಭ ಪುಣೆ ಬಂಟರ ಸಂಘದ ಅಧ್ಯಕ್ಷ  ಇನ್ನ ಕುರ್ಕಿಲ್‌ಬೆಟ್ಟು ಸಂತೋಷ್‌ ಶೆಟ್ಟಿಯವರು ಮಾತನಾಡಿ ವಿಶ್ವಬಂಟರ ಸಮ್ಮಿಲನದಲ್ಲಿ ಪುಣೆಯ ಸಮಾಜ ಬಾಂಧವರೆಲ್ಲರೂ ಭಾಗವಹಿಸುವಂತೆ ವಿನಂತಿಸಿದರು. 

ವೇದಿಕೆಯಲ್ಲಿ ಪುಣೆ ಬಂಟರ ಸಂಘದ ಗೌರವಾಧ್ಯಕ್ಷ ಓಣಿಮಜಲು ಜಗನ್ನಾಥ ಶೆಟ್ಟಿ, ಬಾಕೂìರು ಮಹಾಸಂಸ್ಥಾನದ ಮುಂಬ ಯಿ ಘಟಕದ ಅಧ್ಯಕ್ಷ ಡಾ| ಸತ್ಯಪ್ರಕಾಶ್‌ ಶೆಟ್ಟಿ, ಬಾಕೂìರು ಮಹಾಸಂಸ್ಥಾನದ ವಿಶ್ವಸ್ಥರಾದ ಕೆ. ಎಂ. ಶೆಟ್ಟಿ, ಬಂಟ್ಸ್‌ ಅಸೋಸಿಯೇಶನ್‌ ಪುಣೆ ಅಧ್ಯಕ್ಷ ನಾರಾಯಣ ಕೆ. ಶೆಟ್ಟಿ , ಪಿಂಪ್ರಿ-ಚಿಂಚಾÌಡ್‌ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ವಿಶ್ವನಾಥ ಡಿ. ಶೆಟ್ಟಿ, ಎರ್ಮಾಳ್‌ ನಾರಾಯಣ ಕೆ. ಶೆಟ್ಟಿ, ಎರ್ಮಾಳ್‌ ವಿಶ್ವನಾಥ ಶೆಟ್ಟಿ, ವಿಠಲ್‌ ಶೆಟ್ಟಿ, ಪುಣೆ ಬಂಟರ ಸಂಘದ ಉಪಾಧ್ಯಕ್ಷರಾದ ರಾಮಕೃಷ್ಣ ಶೆಟ್ಟಿ, ಮಾಧವ ಆರ್‌. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಜಿತ್‌ ಹೆಗ್ಡೆ, ಕೋಶಾಧಿಕಾರಿ ವೈ. ಚಂದ್ರಹಾಸ ಶೆಟ್ಟಿ, ವಿಶ್ವನಾಥ ಶೆಟ್ಟಿ, ಪ್ರವೀಣ್‌ ಶೆಟ್ಟಿ, ಸುರತ್ಕಲ್‌ ಬಂಟರ ಸಂಘದ ಅಧ್ಯಕ್ಷ ಉಲ್ಲಾಸ್  ಶೆಟ್ಟಿ, ರಮೇಶ್‌ ಡಿ. ಶೆಟ್ಟಿ  ಪಿಂಪ್ರಿ, ಬಂಟ್ಸ್‌ ಅಸೋಸಿಯೇಶನ್‌ ಪುಣೆ ಮಾಜಿ ಅಧ್ಯಕ್ಷ ಜಯ ಶೆಟ್ಟಿ ಮಿಯ್ನಾರು, ಕೋಶಾಧಿಕಾರಿ ಆನಂದ್‌ ಶೆಟ್ಟಿ ಮಿಯ್ನಾರು, ಭಾಸ್ಕರ ಶೆಟ್ಟಿ ಥಾಣೆ, ಮಾಜಿ ಲಯನ್ಸ್‌ ಗವನರ್‌  ಚಂದ್ರಹಾಸ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.  
ಚಿತ್ರ-ವರದಿ : ಕಿರಣ್‌ ಬಿ. ರೈ ಕರ್ನೂರು

Advertisement

Udayavani is now on Telegram. Click here to join our channel and stay updated with the latest news.

Next