Advertisement

ಬಂಟ್ಸ್‌ ಫೋರಂ ಮೀರಾ-ಭಾಯಂದರ್‌ ವಾರ್ಷಿಕ ಕ್ರೀಡೋತ್ಸವ ಸಮಾರಂಭ

03:14 PM Feb 22, 2019 | |

ಮುಂಬಯಿ: ಮಕ್ಕಳನ್ನು ಪಾಲಕರು ಎಳೆಯ ವಯಸ್ಸಿನಲ್ಲೇ ಕ್ರೀಡೆಯಲ್ಲಿ ತೊಡಗಿಸಿ ಕ್ರೀಡಾಸಕ್ತಿಯನ್ನು ಬೆಳೆಸಬೇಕು. ಆರೋಗ್ಯದ ಹಿತದೃಷ್ಟಿಯಿಂದಲೂ ಕ್ರೀಡೆಗೆ ಪ್ರಾಮುಖ್ಯತೆ ಇದೆ. ನಾವು ಶಿಕ್ಷಣಕ್ಕೆ ಎಷ್ಟು ಪ್ರಾಮುಖ್ಯತೆ ನೀಡುತ್ತೇವೆಯೋ ಅಷ್ಟೇ ಪ್ರಾಮುಖ್ಯತೆ ಕ್ರೀಡೆಗೂ ನೀಡ ಬೇಕು. ಕ್ರೀಡಾಪಟುಗಳಿಗೆ ಇಂದು ಜಗತ್ತಿನಾದ್ಯಂತ ಉತ್ತಮ ಸ್ಥಾನಮಾನ ಇದೆ. ಈ ನಿಟ್ಟಿನಲ್ಲಿ ಬಂಟ್ಸ್‌ ಫೋರಂ ಪ್ರತೀ ವರ್ಷ ಕ್ರೀಡಾಪಟುಗಳನ್ನು ತಯಾರಿಸಿ ಅವರ ಮುಂದಿನ ಉಜ್ವಲ ಭವಿಷ್ಯಕ್ಕೆ ಸಹಕಾರಿಯಾಗುತ್ತಿದೆ ಎಂದು ಮೀರಾ-ಭಾಯಂದರ್‌ ಹೊಟೇಲ್‌ ಅಸೋಸಿಯೇಶನ್‌ ಅಧ್ಯಕ್ಷ ತಾಳಿಪಾಡಿಗುತ್ತು ರತ್ನಾಕರ ಶೆಟ್ಟಿ ನುಡಿದರು.

Advertisement

ಫೆ. 10ರಂದು ಬಂಟ್ಸ್‌ ಫೋರಂ ಮೀರಾ-ಭಾಯಂದರ್‌ ಸ್ಥಳೀಯ ಮೈದಾನದಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡೋತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ ವಿಜೇತ ಸ್ಪರ್ಧಿಗಳನ್ನು ಅಭಿನಂದಿಸಿ ಶುಭಹಾರೈಸಿದರು.

ದಹಿಸರ್‌ ಶ್ರೀ ದುರ್ಗಾಪರಮೇಶ್ವರಿ ಶನೀಶ್ವರ ಮಂದಿರದ ಪುರೋಹಿತ‌ ಶಂಕರಗುರು ಭಟ್‌ ಹಾಗೂ ಗುರು ಶಂಕರ್‌ ಭಟ್‌ ಅವರು ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ಪ್ರಶಂಸಿಸಿ ಹಾರೈಸಿದರು.

ಅತಿಥಿಯಾಗಿ ಆಗಮಿಸಿದ ಕ್ರೀಡಾಪಟು ದಿನೇಶ್‌ ಗಣೇಶ್‌ ಹೆಗ್ಡೆ ಮಾತನಾಡಿ, ಒಳ್ಳೆಯ ಉದ್ದೇಶವನ್ನು ಇಟ್ಟುಕೊಂಡು ಮಕ್ಕಳಿಗೆ ಹಾಗೂ ಯುವಕರಿಗೆ ಕ್ರೀಡೆಯ ಬಗ್ಗೆ ಪ್ರೋತ್ಸಾಹ ನೀಡಿ ಪ್ರತೀ ವರ್ಷ ಕ್ರೀಡೋತ್ಸವ ನಡೆಸುತ್ತಿರುವ ಬಂಟ್ಸ್‌ ಫೋರಂ ಪದಾಧಿಕಾರಿಗಳು ಹಾಗೂ ಸದಸ್ಯರನ್ನು ಅಭಿನಂದಿಸಿದರು.

ಸಂಸ್ಥೆಯ ಯುವ ವಿಭಾಗದ ಕಾರ್ಯಾಧ್ಯಕ್ಷ ಉದಯ ಎಂ. ಶೆಟ್ಟಿ ಮಾತನಾಡಿ, ಇಂತಹ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮಕ್ಕಳಿಗೆ ಅವರ ಮುಂದಿನ ಶಿಕ್ಷಣಕ್ಕೆ ಇಂದು ನೀಡಿರುವ ಪ್ರಮಾಣಪತ್ರ ಸಹಕಾರಿಯಾಗುತ್ತದೆ. ಮುಂಬರುವ ವರ್ಷಗಳಲ್ಲಿ ಕೆಲವೊಂದು ಕ್ರೀಡಾ ತರಬೇತಿಗೊಂಡಂತಹ ಕಾರ್ಯಕ್ರಮವನ್ನು ಮಕ್ಕಳಿಗೆ ನೀಡಲು ಸಂಸ್ಥೆಯು ಚಿಂತನೆ ನಡೆಸುತ್ತಿದೆ ಎಂದರು.

Advertisement

ಸಲಹಾ ಸಮಿತಿಯ ಕಾರ್ಯಾಧ್ಯಕ್ಷ ಜಯಪ್ರಕಾಶ್‌ ಆರ್‌. ಭಂಡಾರಿ ಮಾತನಾಡಿ, ಅಚ್ಚುಕಟ್ಟಾಗಿ ನಡೆದ ಕ್ರೀಡಾಕೂಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲಾ ಸದಸ್ಯರು ಒಟ್ಟಾಗಿ ಒಮ್ಮತದಿಂದ ಸಂಸ್ಥೆಯನ್ನು ಮುನ್ನಡೆಸಬೇಕು ಎಂದರು.

ಗೌರವಾಧ್ಯಕ್ಷ ಸಂತೋಷ್‌ ರೈ ಬೆಳ್ಳಿಪಾಡಿ ಮಾತನಾಡಿ, ಕ್ರೀಡಾಕೂಟದ ಮೂಲ ಉದ್ದೇಶ ಪರಿಸರದ ಸಮಾಜ ಬಾಂಧವರನ್ನು ಒಟ್ಟುಗೂಡಿಸಿ ಕೌಟುಂಬಿಕ ಪರಿಚಯದ ದೃಷ್ಟಿಯಿಂದ ಕ್ರೀಡೆಗೆ ಮಹತ್ವ ಇದೆ. ಸೋಲು-ಗೆಲುವು ಎಂಬ ಭಾವನೆ ಮನಸ್ಸಿನಲ್ಲಿ ಇಡದೆ ಎಲ್ಲರೂ ಕ್ರೀಡಾಕೂಟದಲ್ಲಿ ಭಾಗವಹಿಸಿ ಸಂಸ್ಥೆಗೆ ಸಹಕರಿಸಬೇಕು ಎಂದು ನುಡಿದರು.

ಬಂಟ್ಸ್‌ ಫೋರಂನ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ ಮಾತನಾಡಿ, ಯಶಸ್ವಿಯಾಗಿ ಕ್ರೀಡಾಕೂಟವನ್ನು ನಡೆಸಿಕೊಟ್ಟ ಎಲ್ಲಾ ಸದಸ್ಯರಿಗೂ ಕೃತಜ್ಞತೆ ಸಲ್ಲಿಸಿ, ಮುಂದೆಯೂ ಇದೇ ರೀತಿ ಸಂಸ್ಥೆಯ ಕಾರ್ಯಕಲಾಪಗಳಲ್ಲಿ ಭಾಗಿಯಾಗಿ ಸಹಕರಿಸಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲ ಸದಸ್ಯರನ್ನು ಹಾಗೂ ಮಕ್ಕಳನ್ನು ಅಭಿನಂದಿಸಿದರು.

ಬೆಳಗ್ಗೆ ಉದ್ಯಮಿ ದಯಾನಂದ ಶೆಟ್ಟಿ ಕೆರಮಾ ಮಾಗಂದಾಡಿ ಇವರು ದೀಪಪ್ರಜ್ವಲಿಸಿ ಬಲೂನ್‌ ಹಾರಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ವಯೋಮಿತಿಗೆ ಅನುಗುಣವಾಗಿ ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಮಹಿಳೆಯರ ತ್ರೋಬಾಲ್‌, ಪುರುಷರಿಗೆ ಕ್ರಿಕೆಟ್‌ ಪಂದ್ಯಾಟ ನಡೆಯಿತು.

ತ್ರೋಬಾಲ್‌ನಲ್ಲಿ 7 ತಂಡಗಳು ಭಾಗವಹಿಸಿದ್ದು, ಸುಜಾತಾ ನೈನ್‌ ತಂಡ ಪ್ರಥಮ, ಪುರುಷರ ಕ್ರಿಕೆಟ್‌ನಲ್ಲಿ 7 ತಂಡಗಳು ಭಾಗವಹಿಸಿದ್ದು, ಹರೀಶ್‌ ಕಾಪು ಇಲೆವೆನ್‌ ತಂಡ ಪ್ರಥಮ ಬಹುಮಾನ ಪಡೆಯಿತು. ವಿಜೇತ ಸ್ಪರ್ಧಿಗಳನ್ನು ಗಣ್ಯರು ಬಹುಮಾನ ವಿತರಿಸಿ ಶುಭಹಾರೈಸಿದರು. ಗಣ್ಯರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ಶೈಲೇಶ್‌ ಶೆಟ್ಟಿ, ವಿನಯ್‌ ಶೆಟ್ಟಿ, ಸತೀಶ್‌ ಶೆಟ್ಟಿ, ಪ್ರಸಾದ್‌ ಹೆಗ್ಡೆ, ರಮಾನಂದ ಶೆಟ್ಟಿ, ನಿತಿನ್‌ ಶೆಟ್ಟಿ, ಧೀರಜ್‌ ಶೆಟ್ಟಿ, ಕಿಶೋರ್‌ ಶೆಟ್ಟಿ, ವಿಜಯಲಕ್ಷ್ಮೀ ಡಿ. ಶೆಟ್ಟಿ, ಸುಜಾತಾ ಶೆಟ್ಟಿ, ಪ್ರತಿಭಾ ಶೆಟ್ಟಿ, ಸುಲೋಚನಾ ಶೆಟ್ಟಿ, ವನಿತಾ ಶೆಟ್ಟಿ, ಸುನೀತಾ ಶೆಟ್ಟಿ, ರೇಖಾ ಶೆಟ್ಟಿ ಹಾಗೂ ಯುವ  ವಿಭಾಗದ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು, ಪದಾಧಿಕಾರಿಗಳು ಸಹಕರಿಸಿದರು.

ಕಾರ್ಯದರ್ಶಿ ಹರ್ಷಕುಮಾರ್‌ ಡಿ. ಶೆಟ್ಟಿ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಅನಿಲ್‌ ಆರ್‌. ಶೆಟ್ಟಿ ವಂದಿಸಿದರು. ಶುಭದೀಪ್‌ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರ. ವೇದಿಕೆಯಲ್ಲಿ ಸಂಚಾಲಕ ಶಿರ್ಲಾಲ್‌ ದಿವಾಕರ ಶೆಟ್ಟಿ, ಉಪಾಧ್ಯಕ್ಷ ಮನ್ಮಥ ಕಡಂಬ, ಕೋಶಾಧಿಕಾರಿ ರಮೇಶ್‌ ಎ. ಶೆಟ್ಟಿ, ಮಹಿಳಾ ವಿಭಾಗದ ಸುಮತಿ ಆರ್‌. ಶೆಟ್ಟಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next