Advertisement

ಬಂಟರ ಸಂಘ:ಲೋಕಾಯುಕ್ತ ವಿಶ್ವನಾಥ ಪಿ. ಶೆಟ್ಟಿ ಅವರಿಗೆ ಗೌರವಾರ್ಪಣೆ

04:49 PM Jul 05, 2019 | Vishnu Das |

ಮುಂಬಯಿ:ಕರ್ನಾಟಕ ರಾಜ್ಯ ಸರಕಾರದ ಲೋಕಾಯುಕ್ತ ವಿಶ್ವನಾಥ ಪಿ. ಶೆಟ್ಟಿ ಅವರು ಜು.4 ರಂದು ಖಾಸಗಿ ಕಾರ್ಯಕ್ರಮದ ನಿಮಿತ್ತ ಬಂಟರ ಸಂಘಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ಲೋಕಾಯುಕ್ತ ವಿಶ್ವನಾಥ ಪಿ. ಶೆಟ್ಟಿ ಅವರನ್ನು ಸ್ವಾಗತಿಸಿ ಪುಷ್ಪಗುತ್ಛವನ್ನಿತ್ತು ಸ್ವಾಗತಿಸಿ ಶುಭ ಹಾರೈಸಿದರು.

Advertisement

ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಬಿ. ಶೆಟ್ಟಿ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಬಂಟರ ಸಂಘ ಜ್ಞಾನ ಮಂದಿರದ ಕಾರ್ಯಾಧ್ಯಕ್ಷ ರವೀಂದ್ರನಾಥ ಭಂಡಾರಿ, ಜ್ಞಾನ ಮಂದಿರದ ಮಾಜಿ ಕಾರ್ಯಾಧ್ಯಕ್ಷ ಶಿವರಾಮ ಜಿ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು ಅಭಿನಂದಿಸಿ ಶುಭ ಹಾರೈಸಿದರು.

ಚಿತ್ರ: ಪ್ರೇಮನಾಥ್‌ ಶೆಟ್ಟಿ,ಮುಂಡ್ಕೂರು

Advertisement

Udayavani is now on Telegram. Click here to join our channel and stay updated with the latest news.

Next