Advertisement

ಮೆಗಾ ಆರ್ಥಿಕ ಸಹಾಯ ವಿತರಣೆ: ಪೂರ್ವಭಾವಿ ಸಭೆ

02:33 PM Jun 06, 2018 | Team Udayavani |

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಆಶ್ರಯದಲ್ಲಿ ಜೂ. 10ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಜರಗಲಿರುವ ವಾರ್ಷಿಕ ಮೆಗಾ ಆರ್ಥಿಕ ಸಹಾಯ ವಿತರಣಾ ಕಾರ್ಯಕ್ರಮದ ರೂಪು ರೇಷೆಗಳ ಬಗ್ಗೆ ವಿಚಾರ ವಿನಿಮಯ ನಡೆಸುವ ಅಂತಿಮ ಪೂರ್ವಭಾವಿ ಸಭೆಯು ಜೂ.4ರಂದು ಸಂಜೆ ಬಂಟರ ಸಂಘದಲ್ಲಿ ನಡೆಯಿತು.    

Advertisement

ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರಗಿದ ಪೂರ್ವಭಾವಿ ಸಭೆಯಲ್ಲಿ ಸಮಿತಿಯ ಉಪಕಾರ್ಯಾಧ್ಯಕ್ಷ ಸುಬ್ಬಯ್ಯ ಶೆಟ್ಟಿ, ಕಾರ್ಯದರ್ಶಿ ಖಾಂದೇಶ್‌ ಭಾಸ್ಕರ್‌ ವೈ. ಶೆಟ್ಟಿ, ನಾರಾಯಣ ಎಂ. ಶೆಟ್ಟಿ, ಬಂಟರವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್‌ ಪಕ್ಕಳ, ಡಾ| ಪ್ರಭಾಕರ ಶೆಟ್ಟಿ, ಪ್ರೇಮನಾಥ ಮುಂಡ್ಕೂರು, ಪ್ರಕಾಶ್‌ ಶೆಟ್ಟಿ ನಲ್ಯಗುತ್ತು, ನವೀನ್‌ ಶೆಟ್ಟಿ ಇನ್ನಬಾಳಿಕೆ, ಆದ್ಯಪಾಡಿ ಬಾಲಕೃಷ್ಣ ಶೆಟ್ಟಿ, ಜಯಂತ್‌ ಆರ್‌. ಪಕ್ಕಳ, ಶಿವಪ್ರಸಾದ್‌ ಶೆಟ್ಟಿ, ಗಿರೀಶ್‌ ಶೆಟ್ಟಿ ತೆಳ್ಳಾರ್‌, ಅನಿಲ್‌ ಶೆಟ್ಟಿ, ರವಿ ಆರ್‌. ಶೆಟ್ಟಿ, ಜಗದೀಶ್‌ ಶೆಟ್ಟಿ ನಂದಿಕೂರು, ಕರ್ನೂರು ಮೋಹನ್‌ ರೈ, ರವೀಂದ್ರ ವೈ. ಶೆಟ್ಟಿ, ಭಾಸ್ಕರ ಟಿ. ಶೆಟ್ಟಿ, ಸಿಎ ವಿಶ್ವನಾಥ್‌ ಶೆಟ್ಟಿ ಮೊದಲಾದವರು ಭಾಗವಹಿಸಿ ಕಾರ್ಯಕ್ರಮದ ಬಗ್ಗೆ  ವಿಚಾರ ವಿನಿಮಯ ನಡೆಸಿದರು.

ಚಿತ್ರ: ಪ್ರೇಮನಾಥ ಶೆಟ್ಟಿ  ಮುಂಡ್ಕೂರು

Advertisement

Udayavani is now on Telegram. Click here to join our channel and stay updated with the latest news.

Next