Advertisement

ಬಂಟರ ಸಂಘ ನವಿಮುಂಬಯಿ:ನೂತನ ಪದಾಧಿಕಾರಿಗಳಿಗೆ ಗೌರವಾರ್ಪಣೆ

04:37 PM Jan 12, 2018 | Team Udayavani |

ನವಿಮುಂಬಯಿ: ಜ. 9ರಂದು ಸಂಜೆ ನವಿಮುಂಬಯಿ ಸಿಬಿಡಿ ಬೇಲಾಪುರದ ಹೊಟೇಲ್‌ ರೆಸಿಡೆನ್ಸಿ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಬಂಟರ ಸಂಘ ನವಿ ಮುಂಬಯಿ ಪ್ರಾದೇಶಿಕ ಸಮಿತಿಯ 2017-2020ರ ಅವಧಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜರಗಿತು.

Advertisement

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ನೂತನ ಕಾರ್ಯಾಧ್ಯಕ್ಷ ಜಗದೀಶ್‌ ಶೆಟ್ಟಿ ನಂದಿಕೂರು ಮತ್ತು ದೀಪಿಕಾ ಜಗದೀಶ್‌ ಶೆಟ್ಟಿ ದಂಪತಿಗೆ ಶಾಲು ಹೊದೆಸಿ ಶುಭಹಾರೈಸಿದರು. 

ನಿರ್ಗಮನ ಕಾರ್ಯಾಧ್ಯಕ್ಷ ಖಾಂದೇಶ್‌ ಭಾಸ್ಕರ್‌ ಶೆಟ್ಟಿ ಅವರು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು.  

ಸಮಿತಿಯ ನೂತನ ಸಂಚಾಲಕ ಖಾಂದೇಶ್‌ ಭಾಸ್ಕರ್‌ ಶೆಟ್ಟಿ, ಸಲಹಾ ಸಮಿತಿಯ ಕಾರ್ಯಾಧ್ಯಕ್ಷ ತಾಳಿಪಾಡಿಗುತ್ತು ಭಾಸ್ಕರ್‌ ಶೆಟ್ಟಿ, ಸಮಿತಿಯ ಉಪ ಕಾರ್ಯಾಧ್ಯಕ್ಷ ಹರೀಶ್‌ ಶೆಟ್ಟಿ ಪಡುಬಿದ್ರೆ, ಕಾರ್ಯದರ್ಶಿ ಶಿಮಂತೂರು ದಯಾನಂದ ಶೆಟ್ಟಿ, ಕೋಶಾಧಿಕಾರಿ ಭಾಸ್ಕರ್‌ ಶೆಟ್ಟಿ ದಕ್ಷಿಣ್‌, ಜತೆ ಕಾರ್ಯದರ್ಶಿ ರವೀಶ್‌ ಜಿ. ಶೆಟ್ಟಿ, ಜತೆ ಕೋಶಾಧಿಕಾರಿ ಬೈಕಾಡಿ ಹೆದ್ದಾರಿಮನೆ ನಾಗೇಶ್‌ ಎ. ಶೆಟ್ಟಿ ಅವರನ್ನು ಗೌರವಿಸಲಾಯಿತು.

ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆ  ರೂಪಾ ಡಿ. ಶೆಟ್ಟಿ ಅವರನ್ನು ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಶೆಟ್ಟಿ ಶಾಲು ಹೊದೆಸಿ ಶುಭಹಾರೈಸಿದರು. ಸಮಿತಿಯ ನಿರ್ಗಮನ ಕಾರ್ಯಾಧ್ಯಕ್ಷೆ ಗುಣವತಿ ಡಿ.  ಶೆಟ್ಟಿ ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು. ಸಮಿತಿಯ ನೂತನ ಪದಾಧಿಕಾರಿಗಳಾದ ಉಪ ಕಾರ್ಯಾಧ್ಯಕ್ಷೆ ಜಯಂತಿ ಸಿ. ಶೆಟ್ಟಿ, ಕಾರ್ಯದರ್ಶಿ ಮಮ್‌ತಾ ಶೆಟ್ಟಿ, ಕೋಶಾಧಿಕಾರಿ ಶಾಲಿನಿ ಡಿ. ಶೆಟ್ಟಿ, ಜತೆ ಕಾರ್ಯದರ್ಶಿ ಯಶೋದಾ  ಡಿ. ಶೆಟ್ಟಿ, ಜತೆ ಕೋಶಾಧಿಕಾರಿ ಗೀತಾ ಎಸ್‌. ಶೆಟ್ಟಿ, ಸಮಿತಿಯ ಸದಸ್ಯರಾದ ಸ್ಮಿತಾ ಶೆಟ್ಟಿ, ಸರಿತಾ ಕೆ. ಶೆಟ್ಟಿ, ವಸಂತಿ ಸಿ. ಶೆಟ್ಟಿ ಇವರನ್ನು ಗೌರವಿಸಲಾಯಿತು.

Advertisement

ಯುವ ವಿಭಾಗದ ನೂತನ ಕಾರ್ಯಾಧ್ಯಕ್ಷ ಅಕ್ಷಯ್‌ ವಿ. ಶೆಟ್ಟಿ ಅವರನ್ನು ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಶಾಲು ಹೊದೆಸಿ, ಆಶೀರ್ವದಿಸಿದರೆ, ಸಂಘದ ಉಪಾಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ ಪುಷ್ಪಗುತ್ಛವನ್ನಿತ್ತು ಗೌರವಿಸಿದರು.  ಸಮಿತಿಯ ನೂತನ ಪದಾಧಿಕಾರಿಗಳಾದ ಉಪ ಕಾರ್ಯಾಧ್ಯಕ್ಷ ಅರುಣ್‌ ಆರ್‌. ಶೆಟ್ಟಿ, ಕಾರ್ಯದರ್ಶಿ ನಿಶ್ಮಿತಾ ಎಸ್‌. ಶೆಟ್ಟಿ, ಕೋಶಾಧಿಕಾರಿ ಪ್ರಸಾದ್‌ ಎಚ್‌. ಶೆಟ್ಟಿ, ಜತೆ ಕಾರ್ಯದರ್ಶಿ ಶಿಲ್ಪಾ ಡಿ. ಶೆಟ್ಟಿ, ಜೊತೆ ಕೋಶಾಧಿಕಾರಿ ಪ್ರತೀಕ್ಷಾ ಜಿ. ಶೆಟ್ಟಿ, ಸಮಿತಿಯ ಸದಸ್ಯರುಗಳಾದ ನಿಧಿ  ವಿ. ಶೆಟ್ಟಿ, ಅನುಷ್ಕಾ ಎಸ್‌. ಶೆಟ್ಟಿ, ಸಾಯಿಕಿರಣ್‌ ಶೆಟ್ಟಿ, ಆವಿಷ್ಕಾರ್‌ ಎಂ. ಶೆಟ್ಟಿ, ಆಕಾಶ್‌ ಪಿ. ಶೆಟ್ಟಿ, ಯಶ್‌ರಾಜ್‌ ಡಿ. ಶೆಟ್ಟಿ, ಯಾಸ್ನಿಕಾ ಡಿ. ಶೆಟ್ಟಿ, ಅಮೃತಾ ಜೆ. ಶೆಟ್ಟಿ, ಅಕ್ಷತಾ ಡಿ. ರೈ, ಸಾರ್ಥಕ್‌ ಬಿ. ಶೆಟ್ಟಿ, ಅಕ್ಷಯ್‌ ಶೆಟ್ಟಿ, ಆರ್ಥಿಕ್‌ ಶೆಟ್ಟಿ, ಪ್ರೀತೇಶ್‌ ಶೆಟ್ಟಿ, ನಿಖೀತಾ ಶೆಟ್ಟಿ, ರಶ್ಮಿ ಎಸ್‌. ಶೆಟ್ಟಿ, ರಾಹುಲ್‌ ವೈ. ಶೆಟ್ಟಿ ಇವರನ್ನು ಗೌರವಿಸಲಾಯಿತು.

ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ  ಆದ್ಯಪಾಡಿ ಬಾಲಕೃಷ್ಣ ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷರಾದ  ಪಾಂಗಾಳ  ಅನಿಲ್‌ ಶೆಟ್ಟಿ,  ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷರಾದ ಭಾಸ್ಕರ ಶೆಟ್ಟಿ ಪದ್ಮ, ಸದಸ್ಯತ್ವ ಸಮಿತಿಯ ಕಾರ್ಯಾಧ್ಯಕ್ಷ ದೆಪ್ಪುಣಿಗುತ್ತು ಚಂದ್ರಹಾಸ ಶೆಟ್ಟಿ, ಆರೋಗ್ಯ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್‌ ಶೆಟ್ಟಿ,  ಮ್ಯಾರೇಜ್‌ಸೆಲ್‌ನ ಕಾರ್ಯಾಧ್ಯಕ್ಷೆ ಶಕುಂತಳಾ ಶೆಟ್ಟಿ, 

ಕ್ಯಾಟರಿಂಗ್‌ ಸಮಿತಿಯ ಕಾರ್ಯಾಧ್ಯಕ್ಷರಾಗಿ ಅಶೋಕ್‌ ಶೆಟ್ಟಿ ಉರಾನ್‌ ಹಾಗೂ ಆಯಾಯ ಸಮಿತಿಯ ಸದಸ್ಯರು, ವಿಭಾಗದ ಮುಖ್ಯಸ್ಥರು, ಮಹಿಳೆಯರನ್ನು ಗೌರವಿಸಲಾಯಿತು.

ಸಂಘದ ಉಪಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಬಿ. ಶೆಟ್ಟಿ, ಜತೆ ಕಾರ್ಯದರ್ಶಿ ಗುಣಪಾಲ್‌ ಶೆಟ್ಟಿ ಐಕಳ, ಜತೆ ಕೋಶಾಧಿಕಾರಿ ಮಹೇಶ್‌ ಶೆಟ್ಟಿ, ದಕ್ಷಿಣ ಮುಂಬಯಿ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಡಾ| ಪ್ರಭಾಕರ ಶೆಟ್ಟಿ ಬಿ., ಮಧ್ಯ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಇಂದ್ರಾಳಿ ದಿವಾಕರ ಶೆಟ್ಟಿ, ಸಮಿತಿಯ ನಿರ್ಗಮನ ಮತ್ತು ಆಗಮನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. 

ಚಿತ್ರ-ವರದಿ : ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

Advertisement

Udayavani is now on Telegram. Click here to join our channel and stay updated with the latest news.

Next