Advertisement

ಬಂಟರ ಸಂಘ ಮಹಿಳಾ ವಿಭಾಗ: ವಾರ್ಷಿಕ ಶ್ರಾವಣ ಸಂಭ್ರಮ 

12:34 PM Aug 23, 2017 | Team Udayavani |

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ಆಶ್ರಯದಲ್ಲಿ ಶ್ರಾವಣ ಸಂಭ್ರಮವು ಆ. 22 ರಂದು ಪೂರ್ವಾಹ್ನ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿತ್ತು. ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ ಅವರು ಜ್ಯೋತಿ ಪ್ರಜ್ವಲಿಸಿ ಸಂಭ್ರಮಕ್ಕೆ ಚಾಲನೆ ನೀಡಿದರು.

Advertisement

ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜಯರಾಮ ಶೆಟ್ಟಿ ಮತ್ತು ಇತರ ಪದಾಧಿಕಾರಿಗಳ ನೇತೃತ್ವದಲ್ಲಿ ನಡೆದ ಶ್ರಾವಣ ಸಂಭ್ರಮದಲ್ಲಿ ಮುಖ್ಯ ಅತಿಥಿಗಳು ಹಾಗೂ ಸಂಘದ ಮಹಾದಾನಿಗಳೂ ಆದ ಗೀತಾ ಎಸ್‌. ಎಂ. ಶೆಟ್ಟಿ, ಲತಾ ಸುಧೀರ್‌ ಶೆಟ್ಟಿ, ವನಿತಾ ಪಾಂಡುರಂಗ ಶೆಟ್ಟಿ, ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜಯರಾಮ ಶೆಟ್ಟಿ, ಉಪ ಕಾರ್ಯಾಧ್ಯಕ್ಷೆ ಮಮತಾ ಎಂ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಕವಿತಾ ಐ. ಆರ್‌.ಶೆಟ್ಟಿ, ಗೌರವ ಕೋಶಾಧಿಕಾರಿ ಆಶಾ ಸಂತೋಷ್‌ ಶೆಟ್ಟಿ, ಜತೆ ಕಾರ್ಯದರ್ಶಿ ಆಶಾ ಸುಧೀರ್‌ ಶೆಟ್ಟಿ, ಜತೆ ಕೋಶಾಧಿಕಾರಿ ಪ್ರಶಾಂತಿ ಡಿ. ಶೆಟ್ಟಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ಸಂಘದ ಮಹಿಳಾ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯೆಯರಿಂದ ಭಜನ ಕಾರ್ಯಕ್ರಮ ಜರಗಿತು. ಸಂಘದ ವಿವಿಧ ಪ್ರಾದೇಶಿಗಳ ಸಮಿತಿಗಳ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯೆಯರು, ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 

ಚಿತ್ರ-ವರದಿ: ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

Advertisement

Udayavani is now on Telegram. Click here to join our channel and stay updated with the latest news.

Next