Advertisement

ಬಂಟರ ಸಂಘ ಮಹಿಳಾ ವಿಭಾಗದ ಮಹಾಸಭೆ

03:53 PM Oct 04, 2018 | Team Udayavani |

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ 40ನೇ ಮಹಾಸಭೆ   ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ರಂಜನಿ ಸುಧಾಕರ್‌ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ವಿವಿಧ  ಕಾರ್ಯಕ್ರಮಗಳೊಂದಿಗೆ ಜರಗಿತು.

Advertisement

ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರಾ ಆರ್‌. ಶೆಟ್ಟಿ  ವರದಿ ವಾಚಿಸಿದ ಬಳಿಕ ಅದನ್ನು ಮಂಜೂರುಗೊಳಿಸಲಾಯಿತು. ವಾರ್ಷಿಕ  ಲೆಕ್ಕಪತ್ರವನ್ನು ಕೋಶಾಧಿಕಾರಿ ಆಶಾ ವಿ. ರೈ ಸಭೆ  ಮುಂದಿರಿಸಿದ ಬಳಿಕ  ಅದನ್ನು ಮಂಜೂರಾತಿಗೊಳಿಸಿದರು.

ಸದಸ್ಯೆಯ ಅನಿಸಿಕೆ ಹಾಗೂ ಕಾರ್ಯಾಧ್ಯಕ್ಷೆ ರಂಜನಿ ಎಸ್‌. ಹೆಗ್ಡೆ ಅವರ ಸಮಾರೋಪ ಭಾಷಣದ ಬಳಿಕ ಚಿತ್ರಾ ಆರ್‌. ಶೆಟ್ಟಿ ವಂದಿಸಿದರು.  ಜತೆ ಕಾರ್ಯದರ್ಶಿ ಮನೋರಮಾ ಎನ್‌. ಬಿ. ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕಾರಿ ಸಮಿತಿ ಸದಸ್ಯೆಯರು, ಸಮಾಜ ಬಾಂಧವರು ಉಪಸ್ಥಿತರಿದ್ದರು. ಮಹಿಳಾ ವಿಭಾಗದ ವಿವಿಧ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.            

 ಚಿತ್ರ-ವರದಿ: ಪ್ರೇಮನಾಥ್‌ ಶೆಟ್ಟಿ  ಮುಂಡ್ಕೂರು

Advertisement

Udayavani is now on Telegram. Click here to join our channel and stay updated with the latest news.

Next