Advertisement
ಆ. 21ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ ಹಾಗೂ ಪದಾಧಿಕಾರಿಗಳ ನೇತೃತ್ವದಲ್ಲಿ ಜರಗಿದ ಅರಸಿನ ಕುಂಕುಮ-ಶ್ರಾವಣ ಸಂಭ್ರಮದ ಸಮಾ ರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು, ಸಂಘದ ಮಹಿಳಾ ವಿಭಾಗವು ಹಲವಾರು ವರ್ಷಗಳಿಂದ ಈ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬರುತ್ತಿದೆ. ಈ ವರ್ಷ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ ಮತ್ತು ತಂಡದವರು ಹೊಸತೊಂದು ಪರಿಕಲ್ಪನೆಯ ಮೂಲಕ ಈ ಆಚರಣೆಗೆ ಜೀವ ತುಂಬಿದ್ದಾರೆ. ಸಂಭ್ರಮದ ಈ ಕಾರ್ಯಕ್ರಮವನ್ನು ಕಂಡು ಅತ್ಯಂತ ಸಂತಸವಾಗಿದೆ ಎಂದು ನುಡಿದು ಮಹಿಳಾ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ ಅವರನ್ನು ಅಭಿನಂದಿಸಿದರು.
ಗೌರವ ಅತಿಥಿಯಾಗಿ ಹೊಟೇಲ್ ರಾಧಾಕೃಷ್ಣ ಅಂಧೇರಿ ಇದರ ಮಾಲಕಿ ಅಂಬಾ ಗೋಪಾಲ್ ಶೆಟ್ಟಿ ಮಾತನಾಡಿ, ಬಂಟ ಮಹಿಳೆಯರು ಸಮುದಾಯದ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಮಹಿಳೆ ತಾಯಿಯಾಗಿ, ಗೃಹಿಣಿಯಾಗಿ, ಬಾಹ್ಯ ಪ್ರಪಂಚದ ಬಗ್ಗೆಯೂ ಚಿಂತನೆ ನಡೆಸುವ ಶಕ್ತಿ ಹೊಂದಿದ್ದಾಳೆ ಎಂದು ನುಡಿದರು.
Related Articles
Advertisement
ಜಾಗತಿಕ ಬಂಟರ ಸಂಘ, ಬಂಟರ ಸಂಘದ ಮಾಜಿ ಅಧ್ಯಕ್ಷರುಗಳು, ಸಂಘದ ಪದಾಧಿಕಾರಿಗಳು, ವಿಶ್ವಸ್ತರುಗಳು, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರು, ಯುವ ವಿಭಾಗ, ಸಂಘದ ಉಪಸಮಿತಿಗಳು, ಪ್ರಾದೇಶಿಕ ಸಮನ್ವಯಕರು, ಕಾರ್ಯಾಧ್ಯಕ್ಷರುಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳನ್ನು ಗೌರವಿಸ ಲಾಯಿತು. ಗೌರವ ಕಾರ್ಯದರ್ಶಿ ಚಿತ್ರಾ ಆರ್. ಶೆಟ್ಟಿ ಹೆಸರು ವಾಚಿಸಿದರು.ಗಣ್ಯರ ಉಪಸ್ಥಿತಿಯಲ್ಲಿ ವಾರ್ಷಿಕ ವಿವಿಧ ಪ್ರಶಸ್ತಿಗಳನ್ನು ಪ್ರದಾನಿಸಲಾಯಿತು. ಅಧ್ಯಕ್ಷ ಪದ್ಮನಾಭ ಎಸ್. ಶೆಟ್ಟಿ ಅವರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಯ ಲಕ್ಷ್ಮೀ ಜೆ. ಶೆಟ್ಟಿ ಪ್ರಾರ್ಥನೆಗೈದರು. ಮಹಿಳಾ ಸದಸ್ಯೆಯರು ಬಂಟಗೀತೆ ಹಾಡಿದರು. ಭೂಮಿಕಾ ಎಂ. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ ದರು. ಗೌರವ ಕಾರ್ಯದರ್ಶಿ ಚಿತ್ರಾ ಆರ್. ಶೆಟ್ಟಿ ವಂದಿಸಿದರು. ವೇದಿಕೆಯಲ್ಲಿ ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಉಮಾ ಕೆ. ಶೆಟ್ಟಿ, ಗೌರವ ಕಾರ್ಯದರ್ಶಿ ಚಿತ್ರಾ ಆರ್. ಶೆಟ್ಟಿ, ಗೌರವ ಕೋಶಾಧಿಕಾರಿ ಆಶಾ ವಿ. ರೈ, ಜೊತೆ ಕಾರ್ಯದರ್ಶಿ ಮನೋರಮಾ ಎನ್. ಬಿ. ಶೆಟ್ಟಿ, ಜತೆ ಕೋಶಾಧಿಕಾರಿ ರತ್ನಾ ಪಿ. ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಮಹಿಳಾ ವಿಭಾಗದಿಂದ ಭಜನ ಕಾರ್ಯಕ್ರಮ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಭಾಂಡೂಪ್ನ ನೃತ್ಯ ವಿದ್ಯಾಲಯದ ಶೈಲಜಾ ಮಧುಸೂದನ್ ಬಳಗದವರಿಂದ ಸುಂದರ ಕಾಂಡ ನೃತ್ಯ ರೂಪಕ ನೆರವೇರಿತು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ್ ಹೆಗ್ಡೆ ಅವರು ಆಯೋಜಿಸಿದ ಅಡುಗೆ ಸ್ಪರ್ಧೆಯಲ್ಲಿ ಅರುಣಪ್ರಭಾ ಬಿ. ಶೆಟ್ಟಿ ಪ್ರಥಮ, ಶಾಂತಾ ಶೆಟ್ಟಿ ದ್ವಿತೀಯ, ಸುಚಿತಾ ಕೆ. ಶೆಟ್ಟಿ ತೃತೀಯ ಬಹುಮಾನ ಪಡೆದರು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಬಂಟರ ಸಂಘ ಮಹಿಳಾ ವಿಭಾಗಕ್ಕೆ ಪ್ರಸ್ತುತ ನಲ್ವತ್ತು ವರ್ಷಗಳು ತುಂಬುತ್ತಿದ್ದು, ಈ ಸಮಯದಲ್ಲಿ ವಿಭಾಗದ ಕಾರ್ಯಾಧ್ಯಕ್ಷೆಯರು ಸಲ್ಲಿಸಿದ ಸೇವೆಯನ್ನು ನೆನಪಿಸುವುದು ನಮ್ಮ ಧರ್ಮ ಮತ್ತು ಕರ್ತವ್ಯವೂ ಹೌದು. ವಿಭಾಗವು ಪ್ರತಿ ವರ್ಷ ಅರಸಿನ ಕುಂಕುಮ ಕಾರ್ಯಕ್ರಮವನ್ನು ಆಯೋಜಿಸುತ್ತಾ ನಮ್ಮ ಮುಂದಿನ ಪೀಳಿಗೆಗೆ ಧರ್ಮ-ಸಂಸ್ಕೃತಿಯ ಅರಿವನ್ನು ಮೂಡಿಸಲು ಪ್ರಯತ್ನಿಸುತ್ತಿದೆ. ಅರಸಿನ ಕುಂಕುಮ ಎನ್ನುವುದು ಭಾಗ್ಯದ ಸಂಕೇತವಾಗಿದೆ. ಹೆಣ್ಣು ಸೃಷ್ಟಿರೂಪಿಣಿಯಾಗಿದ್ದಾಳೆ, ಪ್ರಕೃತಿಗೂ ಹೆಣ್ಣಿಗೂ ಯಾವುದೇ ವ್ಯತ್ಯಾಸವಿಲ್ಲ. ಸದಾ ಸುಖ-ಸೌಭಾಗ್ಯದ ಬದುಕನ್ನು ಬಯಸುತ್ತಿರುವ ಸುಮಂಗಲೆಯರು ಅರಸಿದ ಕುಂಕುಮ ಹಚ್ಚುವ ಮೂಲಕ ಶುಭಹಾರೈಸುವುದು ರೂಢಿಯಲ್ಲಿದೆ. ಮಹಿಳೆಯಲ್ಲಿ ಪ್ರೀತಿ, ಐಕ್ಯತೆ ಹೆಚ್ಚಾಗಲು ಇಂತಹ ಕಾರ್ಯಕ್ರಮಗಳ ಅಗತ್ಯತೆ ಇದೆ. ನಮ್ಮ ಪುರುಷ ವರ್ಗ ಮಹಿಳೆಯರ ಕಾರ್ಯ ಚಟುವಟಿಕೆಗಳಿಗೆ ತುಂಬು ಪ್ರೋತ್ಸಾಹ ನೀಡುತ್ತಿದೆ.
-ರಂಜನಿ ಸುಧಾಕರ ಹೆಗ್ಡೆ, ಕಾರ್ಯಾಧ್ಯಕ್ಷೆ, ಮಹಿಳಾ ವಿಭಾಗದ ಬಂಟರ ಸಂಘ ಮುಂಬಯಿ ಚಿತ್ರ-ವರದಿ: ಪ್ರೇಮನಾಥ್ ಶೆಟ್ಟಿ ಮುಂಡ್ಕೂರು