Advertisement

ಬುರ್ಹಾನ್ ಆಯ್ತು, ಹಿಜ್ಬುಲ್ ನೂತನ ಕಮಾಂಡರ್ ಸೇರಿ 10 ಉಗ್ರರು ಫಿನಿಶ್

12:28 PM May 27, 2017 | Sharanya Alva |

ಶ್ರೀನಗರ:ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಕಮಾಂಡರ್ ಬುರ್ಹಾನ್ ಮುಜಾಫರ್ ವಾನಿ ಭದ್ರತಾ ಪಡೆಯ ಗುಂಡಿಗೆ ಬಲಿಯಾದ ಬಳಿಕ ಸಂಘಟನೆಯ ನೂತನ ಕಮಾಂಡರ್ ಆಗಿ ನೇಮಕಗೊಂಡಿದ್ದ ಉಗ್ರ ಸಬ್ಜಾರ್ ಬಟ್ ಶುಕ್ರವಾರ ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಬಲಿಯಾಗಿರುವ ಘಟನೆ ಜಮ್ಮು ಕಾಶ್ಮೀರದ ತ್ರಾಲ್ ನಲ್ಲಿ ನಡೆದಿದೆ.

Advertisement

ಉಗ್ರರು ಹಾಗೂ ನುಸುಳುಕೋರರನ್ನು ಮಟ್ಟಹಾಕಲು ಮುಂದಾಗಿರುವ  ಭದ್ರತಾ ಪಡೆಗಳು ಇಂದು ನಡೆಸಿದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಕಮಾಂಡರ್ ಸಬ್ಜಾರ್ ಸೇರಿದಂತೆ ಹತ್ತು ಮಂದಿ ಉಗ್ರರನ್ನು ಎನ್ ಕೌಂಟರ್ ನಲ್ಲಿ ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿರುವುದಾಗಿ ತಿಳಿಸಿವೆ. ಪುಲ್ವಾಮಾ ಜಿಲ್ಲೆಯ ತ್ರಾಲ್ ಸೆಕ್ಟರ್ ನ ಬಿಲ್ಡಿಂಗ್ ನಲ್ಲಿ ಅಡಗಿ ಕುಳಿತಿದ್ದ ಇಬ್ಬರು ಉಗ್ರರು ಭಾರತೀಯ ಸೇನಾ ಪಡೆ ದಾಳಿಗೆ ಬಲಿಯಾಗಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯ ರಾಂಪುರ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಕ್ಕೆ ನುಸುಳಲು ಯತ್ನಿಸಿದ್ದ ಆರು ಮಂದಿ ಉಗ್ರರನ್ನು ಭಾರತೀಯ ಸೇನಾ ಪಡೆ ಗುಂಡಿಟ್ಟು ಹತ್ಯೆಗೈದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next