Advertisement

ಗೃಹಸಚಿವರ ಊರಿನ ಸಮೀಪ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಪತ್ತೆ

03:53 PM Sep 28, 2021 | Team Udayavani |

ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಊರಿನ ಸಮೀಪವೆ ಕಾರೊಂದು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

Advertisement

ತೀರ್ಥಹಳ್ಳಿ ತಾಲೂಕಿನ ಆರಗ ಜ್ಞಾನೇಂದ್ರ ಅವರ ಊರು ಗುಡ್ಡೇಕೊಪ್ಪ ಸಮೀಪದ ಹುಣಸೇಕೊಪ್ಪ ಗ್ರಾಮದ ಕಾಡಿನಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಕೋಳಿ ಫಾರ್ಮ್ ನಿಂದ ದುರ್ವಾಸನೆ: ಕ್ರಮಕ್ಕೆ ಗ್ರಾಮಸ್ಥರ ಮನವಿ

ಕಾರಿನಲ್ಲಿದ್ದ ವ್ಯಕ್ತಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಮೂಳೆಗಳು ಮಾತ್ರ ಉಳಿದುಕೊಂಡಿವೆ. ವ್ಯಕ್ತಿಯನ್ನು ಕೊಲೆ ಮಾಡಿ ದೇಹವನ್ನು ಕಾರಿನಲ್ಲಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಸುಟ್ಟುಹಾಕಿರುವ ಬಗ್ಗೆ ಶಂಕೆ ವ್ಯಕ್ತ ಪಡಿಸಲಾಗಿದೆ

Advertisement

ಸ್ಥಳಕ್ಕೆ ತೀರ್ಥಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next