Advertisement

ಬಸ್‌ಡಿಕ್ಕಿ; ಬೈಕ್‌ ಭಸ್ಮ-ಸವಾರ ಸಾವು

05:19 PM Apr 23, 2019 | pallavi |

ಲಿಂಗಸುಗೂರು: ಲಾರಿಯನ್ನು ಓವರ್‌ಟೇಕ್‌ ಮಾಡಲು ಹೋದ ಬೈಕ್‌ಗೆ ಎದುರಿಗೆ ಬರುತ್ತಿದ್ದ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸುಟ್ಟು ಕರಕಲಾಗಿ ಸವಾರ ಮೃತಪಟ್ಟ ಘಟನೆ ಸೋಮವಾರ ಬೆಂಗಳೂರು ಬೈಪಾಸ್‌ ರಸ್ತೆಯಲ್ಲಿ ಜರುಗಿದೆ.

Advertisement

ಸಿಂಧನೂರು ತಾಲೂಕಿನ ಹೆಡಗಿನಾಳ ಗ್ರಾಮದ ದೇವೇಂದ್ರ ವೀರಭದ್ರಪ್ಪ (26) ಮೃತ ಸವಾರ. ಹೆಡಗಿನಾಳ ಗ್ರಾಮದಿಂದ ಲಿಂಗಸುಗೂರು ಪಟ್ಟಣಕ್ಕೆ ಬೈಕ್‌ನಲ್ಲಿ ಬರುವಾಗ ಪಟ್ಟಣದ ಬೆಂಗಳೂರು ಬೈಪಾಸ್‌ ರಸ್ತೆಯಲ್ಲಿ ಲಾರಿ ಓವರ್‌ಟೇಕ್‌ ಮಾಡಲು ಹೋಗಿ ಎದುರಿಗೆ ಬಂದ್‌ ಕಲಬುರಗಿ 2ನೇ ಡಿಪೋಗೆ ಸೇರಿದ ಕಲಬುರಗಿ-ಬಳ್ಳಾರಿ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ತೀವ್ರ ಗಾಯಗೊಂಡಿದ್ದ ಸವಾರ ದೇವೇಂದ್ರ ಅವರನ್ನು ಬಾಗಲಕೋಟೆ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದರು. ಪಿಎಸ್‌ಐ ಕೆ.ಎಚ್. ದಾದಾವಲಿ ಭೇಟಿ ನೀಡಿ ಪರಿಶೀಲಿಸಿದರು. ಲಿಂಗಸುಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಸ್‌ ಜಪ್ತಿ ಮಾಡಿ, ಚಾಲಕನನ್ನು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next