Advertisement

ಕನಗನಮರಡಿ ಬಸ್‌ ದುರಂತ: ಸಂತ್ರಸ್ತರಿಗೆ ಕೇಂದ್ರದಿಂದ 2 ಲಕ್ಷ ರೂ. ಪರಿಹಾರ

11:49 PM Jun 12, 2019 | Team Udayavani |

ಮಂಡ್ಯ: ಪಾಂಡವಪುರ ತಾಲೂಕಿನ ಕನಗನಮರಡಿ ಬಸ್‌ ದುರಂತದಲ್ಲಿ ಮೃತಪಟ್ಟ 30 ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಇದಕ್ಕೆ ಸಂಸದೆ ಸುಮಲತಾ ಅಂಬರೀಶ್‌ ಕೃತಜ್ಞತೆ ಸಲ್ಲಿಸಿದ್ದಾರೆ.

Advertisement

ಖಾಸಗಿ ಬಸ್ಸೊಂದು ಕನಗನಮರಡಿ ಸಮೀಪ ನಾಲೆಗೆ ಉರುಳಿ ಅದರಲ್ಲಿದ್ದ 30 ಮಂದಿ ಜಲಸಮಾಧಿಯಾಗಿದ್ದರು. ಈ ಕುರಿತಾದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿ ನೆರವು ಕೋರಲಾಗಿತ್ತು. ಅದರಂತೆ ಕೇಂದ್ರ ಸರ್ಕಾರ ಮೃತ ಕುಟುಂಬಕ್ಕೆ ತಲಾ 2 ಲಕ್ಷ ರೂ.ಪರಿಹಾರದ ಚೆಕ್‌ ತಲುಪಿಸಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸುಮಲತಾ, ಮೃತ ಕುಟುಂಬಕ್ಕೆ ಕೇಂದ್ರ ಸರ್ಕಾರ ಪರಿಹಾರ ಘೋಷಣೆ ಮಾಡಿರುವುದು ವೈಯಕ್ತಿಕವಾಗಿ ನನಗೆ ಸಂತಸ ತಂದಿದೆ. ಅಂದಿನ ದುರ್ಘ‌ಟನೆ ಎಲ್ಲರಿಗೂ ನೋವುಂಟು ಮಾಡಿತ್ತು. ಒಟ್ಟಿನಲ್ಲಿ ಮಂಡ್ಯ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಿದಕ್ಕಾಗಿ ಮೋದಿ ಜೀ ಮತ್ತು ಭಾರತ ಸರ್ಕಾರಕ್ಕೆ ಧನ್ಯವಾದಗಳು’ ಎಂದು ಫೇಸ್‌ಬುಕ್‌ನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next