Advertisement

ಮಾಣಿ: ಬಸ್‌ ಪಲ್ಟಿ; ಮಹಿಳೆ ಸಾವು

11:30 AM Mar 15, 2018 | Team Udayavani |

ವಿಟ್ಲ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಜಂಕ್ಷನ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಗೆ ಉರುಳಿದ ಪರಿಣಾಮ, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ. ಉಪ್ಪಿನಂಗಡಿಯ ರಾಮನಗರ ನಿವಾಸಿ ದಿವ್ಯಾ ಪ್ರಭು (40) ಸಾವನ್ನಪ್ಪಿದ್ದು, ನಿರ್ವಾಹಕ ಸಹಿತ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹತ್ತಕ್ಕಿಂತಲೂ ಅಧಿಕ ಮಂದಿ ಸಣ್ಣ ಪುಟ್ಟ ಗಾಯಗೊಂಡು ಪಾರಾಗಿದ್ದಾರೆ.

Advertisement

ಉಪ್ಪಿನಂಗಡಿಯ ರಾಮನಗರ ನಿವಾಸಿಗಳಾದ ರತ್ನಾ ಪ್ರಭು (71) ದೀಪ್ತಿ ಪ್ರಭು (11) ಯಶಸ್‌ ಪ್ರಭು (8) ಸಹಿತ ಕೆಲವರನ್ನು  ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಮತ್ತು  ನಿರ್ವಾಹಕ ಪ್ರಭಾಕರ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next