ಬಂಟ್ವಾಳ: ಜಕ್ರಿಬೆಟ್ಟು ಬಳಿ ಭಾನುವಾರ ಬೆಳಿಗ್ಗೆ ಬಸ್ನಡಿಗೆ ಬೈಕ್ ಬಿದ್ದು ಇಬ್ಬರು ಸವಾವರರು ದಾರುಣವಾಗಿ ಸಾವನ್ನಪ್ಪಿದ ಭೀಕರ ಅವಘಡ ನಡೆದಿದೆ.
ಮೃತ ದುರ್ದೈವಿಗಳು ಮಂಗಳೂರು ಕುಡುಪು ನಿವಾಸಿ ಚರಣ್ ( 18) ಮತ್ತು ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ದಂಡೆಗೋಳಿ ನಿವಾಸಿ ಮಹಮದ್ ನೌಶಾದ್ (18) ಎಂದು ತಿಳಿದು ಬಂದಿದೆ.
ಬಿಸಿರೋಡಿನಿಂದ ಇತಿಹಾಸ ಪ್ರಸಿದ್ಧ ದೇವಸ್ಥಾನ ಕಾರಿಂಜ ದೇವಸ್ಥಾನ ದ ಕಡೆ ತೆರಳುತ್ತಿದ್ದ ವೇಳೆ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ಸರಕಾರಿ ಬಸ್ ರಾಂಗ್ ಸೈಡ್ ಗೆ ಬಂದು ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬೈಕ್ ಸವಾರರು ಬಸ್ ನ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ.
ಸ್ಥಳೀಯರು ಹರಸಾಹಸ ಪಟ್ಟು ಬಸ್ ನಡಿಯಲ್ಲಿ ಸಿಲುಕಿ ಕೊಂಡಿದ್ದ ಸವಾರರನ್ನು 108 ಅಂಬ್ಯುಲೆನ್ಸ್ ಮೂಲಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.
ಗಂಭೀರ ಸ್ವರೂಪದ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿ ಯಾಗದೆ ಕೊನೆಯುಸಿರೆಳೆದಿದ್ದಾರೆ.
ಬಂಟ್ವಾಳ ಟ್ರಾಫಿಕ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.