Advertisement

ಬಸ್‌ಗಳ ಮುಖಾಮುಖಿ ಡಿಕ್ಕಿ: ಮೂವರ ದುರ್ಮರಣ

08:11 AM Dec 05, 2017 | |

ಹಾಸನ: 2 ಬಸ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟು 10ಕ್ಕೂ ಅಧಿಕ ಜನ ಗಾಯಗೊಂಡ ಘಟನೆ ಜಲ್ಲೆಯ ಆಲೂರು ತಾಲೂಕಿನ ಹೆದ್ದುರ್ಗೆ ಗ್ರಾಮದಲ್ಲಿ ಮಂಗಳವಾರ ನಸುಕಿನ ಜಾವ ನಡೆದಿದೆ.

Advertisement

ಬೆಂಗಳೂರು ಮುರುಗೇಶ್ ಪಾಳ್ಯದ ಕಾರ್ತಿಕ್ ರೆಡ್ಡಿ(30ವರ್ಷ), ಕಾಸರಗೋಡಿನ ಫಾತಿಮಾ(27),ಉಡುಪಿ ನಿವಾಸಿ ಯಶೋಧಾ(44) ಸೇರಿ ಮೂವರು ಮೃತಪಟ್ಟ ದುರ್ದೈವಿಗಳು. ಕೆಎಸ್‌ಆರ್‌ಟಿಸಿ ವೋಲ್ವೊ ಬಸ್‌  ಹಾಗೂ ದುರ್ಗಾಂಬ ಬಸ್‌ಗಳ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಾಸಲಾಗಿದೆ ಎಂದು ತಿಳಿದು ಬಂದಿದೆ.

ಆಲೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಹೆದ್ದುರ್ಗದಲ್ಲಿ ಘಟನೆ ಸಂಭವಿಸಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟ್ರಾಫಿಕ್‌ ಜಾಮ್‌ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next