Advertisement

ಭೀಕರ ರಸ್ತೆ ಅಪಘಾತ: ಕಾರಿಗೆ ಬಸ್‌ ಢಿಕ್ಕಿ; ಮೂವರು ಸಾವು

09:31 AM Nov 09, 2019 | Sriram |

ಮೈಸೂರು: ಖಾಸಗಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯವಾಗಿರುವ ಘಟನೆ ಮೈಸೂರಿನ ಟಿ ನರಸೀಪುರ ತಾಲೂಕಿನ ದುದ್ದಗಹಳ್ಳಿ ಪೇಪರ್ ಮಿಲ್ ಬಳಿ ಶುಕ್ರವಾರ ನಡೆದಿದೆ.

Advertisement

ಮೃತರೆಲ್ಲ ಬೆಂಗಳೂರು ನಿವಾಸಿಗಳಾಗಿದ್ದು,ಗೃಹ ಪ್ರವೇಶ ಕಾರ್ಯಕ್ರಮಕ್ಕಾಗಿ ಮೈಸೂರಿಗೆ ಆಗಮಿಸಿದ್ದರು. ಸಮಾರಂಭ ಮುಗಿಸಿ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವರುಣಾ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next