Advertisement

ಬಸ್‌ – ಬೈಕ್‌ ಮುಖಾಮುಖಿ ಢಿಕ್ಕಿ: ಹುಟ್ಟಿದ ದಿನದಂದೇ ವಿದ್ಯಾರ್ಥಿ ಸಾವು

12:37 AM Jun 22, 2023 | Team Udayavani |

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಮೊಗೆರಡ್ಕ ಕ್ರಾಸ್‌ ಸಮೀಪ ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ವಿದ್ಯಾರ್ಥಿ ಮೂಲತಃ ಕಾಸರಗೋಡು ಪೆರಿಯಡ್ಕ ಮೂಲದ ದೀಕ್ಷಿತ್‌ (19) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ.

Advertisement

ಜೂ. 21ರಂದು ದೀಕ್ಷಿತ್‌ನ ಹುಟ್ಟುಹಬ್ಬವಾಗಿದ್ದರಿಂದ ಬೆಳಗ್ಗೆ ವೇಣೂರಿನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿತು. ಬಸ್‌ ಚಾಲಕ ಅತೀ ವೇಗದಲ್ಲಿ ಲಾರಿಯೊಂದನ್ನು ಹಿಂದಿಕ್ಕುವ ಭರದಲ್ಲಿ ರಸ್ತೆಯ

ತೀರಾ ಬಲ ಭಾಗಕ್ಕೆ ಬಂದಿದ್ದು ಎದುರಿನಿಂದ ಬಂದ ಬೈಕ್‌ ಬಸ್ಸಿನ ಮುಂಭಾಗಕ್ಕೆ ನೇರವಾಗಿ ಢಿಕ್ಕಿ ಹೊಡೆಯಿತು.

ಅಪಘಾತದ ತೀವ್ರತೆಗೆ ಬೈಕ್‌ ಸವಾರನ ತಲೆಗೆ ಗಂಭೀರ ಗಾಯ ವಾಗಿದ್ದು, ತತ್‌ಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು. ಬೆಳ್ತಂಗಡಿ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ರೀಡಾಪಟು, ಕಂಬಳ ಓಟಗಾರ
ಮೃತ ದೀಕ್ಷಿತ್‌ ಪಡಂಗಡಿ ಗ್ರಾಮದ ಓಡೀಲಿನಲ್ಲಿ ಅಜ್ಜನ ಮನೆಯಲ್ಲಿದ್ದು, ವೇಣೂರಿನ ಎಸ್‌ಡಿಎಂ ಐಟಿಐಯಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿ ಶಿಕ್ಷಣ ಪಡೆಯುತ್ತಿದ್ದರು. ಉತ್ತಮ ಕ್ರೀಡಾಪಟುವಾಗಿದ್ದ ಈತ ಕಬಡ್ಡಿ ಆಟಗಾರನಾಗಿ ಜತೆಗೆ ಕಂಬಳದ ಓಟಗಾರನಾಗಿ ಗುರುತಿಸಿ ಕೊಂಡಿದ್ದರು.
ಮೃತ ದೀಕ್ಷಿತ್‌ ಹೆತ್ತವರು ಮತ್ತು ಸಹೋದರನನ್ನು ಅಗಲಿದ್ದಾರೆ. ಮೃತರ ಮನೆಗೆ ಮಾಜಿ ಶಾಸಕ ಕೆ. ವಸಂತ ಬಂಗೇರ ಭೇಟಿ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next