Advertisement

Road Mishap; ಬಸ್‌, ಕಾರು ಢಿಕ್ಕಿ: ಚಾಲಕ ಗಂಭೀರ

12:29 AM Mar 18, 2024 | Team Udayavani |

ಪುಂಜಾಲಕಟ್ಟೆ: ಸರಕಾರಿ ಬಸ್‌ ಮತ್ತು ಕಾರು ಢಿಕ್ಕಿಯಾಗಿ ಕಾರು ಚಾಲಕ ಕಾವಳಪಡೂರು ಗ್ರಾಮದ ಮಧ್ವಪಲ್ಕೆ ನಿವಾಸಿ ಸಿರಿಲ್‌ ಡಿ’ಸೋಜಾ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಬಾಂಬಿಲದಲ್ಲಿ ಸಂಭವಿಸಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಬೆಳ್ತಂಗಡಿ ಕಡೆಗೆ ಸಾಗುತ್ತಿದ್ದ ಬಸ್‌, ವಗ್ಗ ಕಡೆಗೆ ಸಾಗುತ್ತಿದ್ದ ಕಾರಿಗೆ ಬಾಂಬಿಲ ಸೇತುವೆ ಬಳಿಯ ತಿರುವಿನಲ್ಲಿ ಢಿಕ್ಕಿಯಾಗಿದೆ. ಕಾರಿನ ಮುಂಭಾಗ ಬಸ್‌ನ ಅಡಿಯಲ್ಲಿ ಸಿಲುಕಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ. ಬಳಿಕ ಬಸ್ಸನ್ನು ಹಿಂದಕ್ಕೆ ಚಲಾಯಿಸಿ ಕಾರು ಚಾಲಕನನ್ನು ಹೊರ ತೆಗೆಯಲಾಯಿತು. ತತ್‌ಕ್ಷಣವೇ ಸ್ಥಳೀಯರು ಖಾಸಗಿ ಆಂಬ್ಯುಲೆನ್ಸ್‌ನಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದರು. ಸಿರಿಲ್‌ ಅವರ ಕಾಲು ಮುರಿತವಾಗಿದ್ದು, ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸಂದರ್ಭದಲ್ಲಿ ಬಸ್‌ ಚಾಲಕನನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಬಂಟ್ವಾಳ ಟ್ರಾಫಿಕ್‌ ಎಸ್‌ಐ ಸುತೇಶ್‌, ಬಂಟ್ವಾಳ ಗ್ರಾಮಾಂತರ ಎಸ್‌ಐ ಹರೀಶ್‌ ಅವರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

ಈ ಸ್ಥಳದಲ್ಲಿ ಪದೇಪದೆ ಅಪಘಾತಗಳು ಸಂಭವಿಸುತ್ತಿದ್ದು, ಹೆದ್ದಾರಿ ಅಭಿವೃದ್ಧಿ ಸಮಯದಲ್ಲಿ ಅವೈಜ್ಞಾನಿಕ ತಿರುವು ನೀಡಿರುವುದು ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ರಸ್ತೆ ಸುರಕ್ಷೆ ಬಗ್ಗೆ ಕ್ರಮ ಕೈಗೊಳ್ಳುವಂತೆ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಮಾಡುವುದಾಗಿ ಟ್ರಾಫಿಕ್‌ ಎಸ್‌ಐ ಸುತೇಶ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next