Advertisement

ಕಟೀಲು ದೇವಸ್ಥಾನದ ಎದುರು ಹೊತ್ತಿ ಉರಿದ ಬಸ್ಸು: ಜಿಗಿದು ಪಾರಾದ ಚಾಲಕ

04:03 PM May 17, 2023 | Team Udayavani |

ಕಟೀಲು: ಕಟೀಲು ದೇವಸ್ಥಾನದ ಮುಂದೆ ಎಂಆರ್‌ಪಿಎಲ್ ಕಂಪನಿಗೆ ಸೇರಿದ ಬಸ್ ಏಕಾಏಕಿ ಹೊತ್ತಿ ಉರಿದಿದ್ದು ಬಸ್ಸಿನಲ್ಲಿದ್ದ ಮೂವರು ಪವಾಡ ಸದೃಶ ಪಾರಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

Advertisement

ಸುರತ್ಕಲ್ ಸಮೀಪದ ಓಎಂಪಿಎಲ್ ಗೆ ಸಿಬಂದಿಗಳನ್ನು ಕರೆದೊಯ್ಯುವ  ಬಸ್ಸು ಮಧ್ಯಾಹ್ನ 2.45ರ ಸುಮಾರಿಗೆ ಕಟೀಲು ದೇವಸ್ಥಾನದ ಎದುರು ರಾಜ್ಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಹೊತ್ತಿ ಉರಿದಿದೆ.

ಏನಾಯಿತು ಎಂದು ತಿಳಿಯುವಷ್ಟರಲ್ಲಿ ಸ್ಥಳೀಯರು ಭಯಭೀತರಾಗಿದ್ದು  ಕೂಡಲೇ ಸ್ಥಳೀಯವಾಗಿ ನೀರು ಸರಬರಾಜು ಮಾಡುವ ಮೂರು ಕಾವೇರಿ ವಿಶ್ವನಾಥ ಎಂಬುವವರ ನೀರಿನ  ಟ್ಯಾಂಕರ್ ಮೂಲಕ  ನೀರು ಹಾಯಿಸಿ ಬೆಂಕಿ ನಂದಿಸಲಾಗಿದೆ.

ಕಟೀಲು ರೂಟ್ ನಲ್ಲಿ ಚಲಿಸುವ ಓಎಂಪಿಎಲ್ ಕಂಪನಿಯ ಈ ಬಸ್  ಕಡೆಯ ನೌಕರನ್ನು  ಬಿಟ್ಟು ವಾಪಸ್ಸಾಗುವ ಈ ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ ಡ್ರೈವರ್ ಸೇರಿ ಮೂರು ಜನ ಇದ್ದಾರೆಂದು ತಿಳಿದು ಬಂದಿದ್ದು ,ಬೆಂಕಿ ತಗಲಿದ ಕೂಡಲೇ ಬಸ್ಸಿನಲ್ಲಿದ್ದ ಚಾಲಕ ಹಾಗೂ ಇನ್ನಿಬ್ಬರು ಬಸ್ಸಿನಿಂದ ಜಿಗಿದು ಪವಾಡ ಸದೃಶ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next