Advertisement

ಸೇಡಂ ಬಸ್ ಡಿಪೋದಲ್ಲೇ ನಿರ್ವಾಹಕ ನೇಣು ಬಿಗಿದುಕೊಂಡು ಆತ್ಮಹತ್ಯೆ

12:24 PM Sep 10, 2022 | Team Udayavani |

ಕಲಬುರಗಿ: ಸೇಡಂ ತಾಲೂಕಿನ ಬಸ್ ಡಿಪೋ ಒಳಗಿನ ಸಿಬ್ಬಂದಿ ವಿಶ್ರಾಂತಿ ಕೋಣೆಯ ಹಿಂಬದಿಯಲ್ಲಿರುವ ತಾತ್ಕಾಲಿಕ ಶೆಡ್ ನಲ್ಲಿ ನಿರ್ವಾಹಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Advertisement

ಮೃತ ನಿರ್ವಾಹಕನನ್ನು ಅಫಜಲಪುರ ತಾಲೂಕಿನ ಗುಡೂರ ಗ್ರಾಮದ ಭೀಮಾಶಂಕರ (45 ವ) ಎಂದು ಗುರುತಿಸಲಾಗಿದೆ. ಇವರು ಒಂದು ತಿಂಗಳ ಹಿಂದಷ್ಟೆ ಚಿಂಚೋಳಿಯಿಂದ ಸೇಡಂಗೆ ವರ್ಗಾವಣೆಯಾಗಿ ಬಂದಿದ್ದರು.

ಪತ್ನಿ, ಇಬ್ಬರು ಪುತ್ರರಿದ್ದಾರೆ. ತಲೆಗೆ, ಮುಖಕ್ಕೆ ಬಟ್ಟೆ ಸುತ್ತಿಕೊಂಡು ನೇಣು ಹಾಕಿಕೊಂಡಿದ್ದಾರೆ.

ಇದನ್ನೂ ಓದಿ:ಬಾಲಿವುಡ್‌ ನಲ್ಲಿ ಇದುವರೆಗೆ ಪ್ರತಿಭಾವಂತ ಕಲಾವಿದರು ಸಿಕ್ಕಿಲ್ಲ: ಕರಣ್‌ ಜೋಹರ್

ಭೀಮಾಶಂಕರ ಅವರಿಗೆ ಮೇಲಾಧಿಕಾರಿಗಳ ಕಿರುಕುಳ ಇತ್ತು ಎಂದು ಪತ್ನಿ ಆರೋಪಿದ್ದಾರೆ. ಈ ಹಿನ್ನೆಯಲ್ಲಿ ಪೊಲೀಸರಿಗೆ ದೂರು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next