Advertisement

ಸಿಎಂ ಪರಿಹಾರ ನಿಧಿಗೆ ತಿಂಗಳ ವೇತನ ನೀಡಿದ ಬಸ್‌ ನಿರ್ವಾಹಕ

01:20 PM Apr 22, 2020 | Suhan S |

ಹುಬ್ಬಳ್ಳಿ: ಇಲ್ಲಿನ ವಾಯವ್ಯ ಸಾರಿಗೆ ಸಂಸ್ಥೆಯ ನಿರ್ವಾಹಕರೊಬ್ಬರು ತಮ್ಮ ಒಂದು ತಿಂಗಳ ವೇತನವನ್ನು ಕೋವಿಡ್‌-19 ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.

Advertisement

ಇಲ್ಲಿನ ವಾಯವ್ಯ ಸಾರಿಗೆ ಸಂಸ್ಥೆಯ ನಗರ ಸಾರಿಗೆ ವಿಭಾಗದ ನಗರ ಒಂದನೇ ಘಟಕದಲ್ಲಿ ನಿರ್ವಾಹಕರಾಗಿ ಕಾರ್ಯ ನಿರ್ವಹಿಸುತ್ತಿರುವ ನವಲಗುಂದ ತಾಲೂಕಿನ ಶಿರಕೋಳ ಗ್ರಾಮದ ಬಸವರಾಜ ಗಾಣಿಗೇರ ತಮ್ಮ ಒಂದು ತಿಂಗಳ ವೇತನ 25,000 ರೂ. ಚೆಕ್‌ನ್ನು ಜಿಲ್ಲಾಧಿಕಾರಿ ಮೂಲಕ ಸಿಎಂ ಪರಿಹಾರ ನಿಧಿಗೆ ಸಲ್ಲಿಸಿದರು.

ಚೆಕ್‌ ಸ್ವೀಕರಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್‌, ಸಾರಿಗೆ ಸಂಸ್ಥೆ ನಿರ್ವಾಹಕರೊಬ್ಬರು ಸ್ವಯಂ ಪ್ರೇರಣೆಯಿಂದ ತಮ್ಮ ಒಂದು ತಿಂಗಳ ವೇತನ ನೀಡಿ ಮಾದರಿಯಾಗಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ವಾಕರಸಾಸಂ ವಿಭಾಗೀಯ ನಿಯಂತ್ರಕರಾದ ವಿವೇಕಾನಂದ ವಿಶ್ವಜ್ಞ, ಹನುಮಂತ ಬೋಜೇದಾರ್‌, ಬಸವರಾಜ ಅವಾರಿ, ಎಂ.ಎಸ್‌. ರೋಣದ, ವೆಂಕಟೇಶ ಹರ್ತಿ, ಡಾ| ಪಿ.ವಿ.ಸವದಿ ಈ ವೇಳೆ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next