Advertisement

ಸ್ಟೀಯರಿಂಗ್ ತುಂಡಾಗಿ ಮರಕ್ಕೆ ಢಿಕ್ಕಿ ಹೊಡೆದ ಬಸ್: 25 ಜನರಿಗೆ ಗಾಯ, ಮೂವರು ಗಂಭೀರ

10:03 AM Feb 10, 2020 | keerthan |

ಕಲಬುರಗಿ: ಮರಕ್ಕೆ ಸಾರಿಗೆ ಬಸ್ ಗುದ್ದಿದ ಪರಿಣಾಮ ಸುಮಾರು 25 ಜನರು ಗಾಯಗೊಂಡ ಘಟನೆ ರವಿವಾರ ಬೆಳಿಗ್ಗೆ ಜಿಲ್ಲೆಯ ಚಿಂಚೋಳಿ ಶುಗರ್ ಮಿಲ್ ಆ್ಯಂಡ್ ಬಯೋ ಇಂಡಸ್ಟ್ರೀಸ್‌ ಬಳಿ ನಡೆದಿದೆ.

Advertisement

ಚಿಂಚೋಳಿಯಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಹೊರಟಿದ್ದ ಬಸ್ ನ ಸ್ಟೀಯರಿಂಗ್ ತುಂಡಾದ್ದರಿಂದ ಈ ಅಪಘಾತ ಸಂಭವಿಸಿದೆ.‌ ಬಸ್ ಚಾಲಕ ಸೇರಿದಂತೆ 25 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಮೂವರ ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಒಟ್ಟು ಆರು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ನಿಲ್ದಾಣದಿಂದ ಹೊರಟ ಮೂರು ಕಿ.ಮೀ. ಅಂತರದಲ್ಲಿಯೇ ಈ ಅವಘಡ ಸಂಭವಿಸಿದೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಸಬ್ ಇನಸ್ಪೆಕ್ಟರ್ ರಾಜಶೇಖರ ರಾಠೋಡ ಹಾಗೂ ಮೊದಲಾದವರು ಭೇಟಿ ನೀಡಿ, ಪರಿಶೀಲಿಸಿದರು. ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next