Advertisement

ಹೃದಯಾಘಾತ: ಸಾವಿನಲ್ಲೂ ಸಾರ್ಥಕತೆ ಮೆರೆದ ಬಸ್‌ ಚಾಲಕ !

10:15 AM Mar 17, 2017 | Team Udayavani |

ಶಿರಾ : ಇಲ್ಲಿ ಖಾಸಗಿ ಬಸ್ಸೊಂದು ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ ಘಟನೆ ಶುಕ್ರವಾರ ಬೆಳಗ್ಗೆ 9 ಗಂಟೆಯ ವೇಳಗೆ ಸಂಭವಸಿದ್ದು , ಸಾವಿನ ಕ್ಷಣದಲ್ಲೂ ಚಾಲಕನ ಸಮಯಪ್ರಜ್ಞೆಯಿಂದಾಗಿ ಭೀಕರ ಅವಘಡವೊಂದು ತಪ್ಪಿಹೋಗಿದೆ. 

Advertisement

ಆಂಧ್ರದ ಅಮರಾಪುರದಿಂದ ಬರಗೂರಿಗೆ ಬರುತ್ತಿದ್ದ ಬಸ್‌ ಲಕ್ಕನಹಳ್ಳಿ ಬಳಿ ಬರುತ್ತಿದ್ದಂತೆ ಚಾಲಕ ನಾಗರಾಜ್‌(56)ಬಸ್ಸನ್ನು ರಸ್ತೆಯ ಬದಿಗೆ ನಿಲ್ಲಿಸಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತಾದರೂ ಅದಾಗಲೇ  ಪ್ರಾಣ ಪಕ್ಷಿ ಹಾರಿಹೋಗಿತ್ತು.

ಬಸ್‌ನಲ್ಲಿ 30 ಮಂದಿ ಪ್ರಯಾಣಿಕರಿದ್ದು ಚಾಲಕನ ಸಮಯಪ್ರಜ್ಞೆಯನ್ನು ಕೊಂಡಾಡಿ , ಸಾವಿಗೆ ತೀವ್ರ ಮರುಕ ಪಟ್ಟಿರುವ ಬಗ್ಗೆ ವರದಿಯಾಗಿದೆ.

ಪಟ್ಟನಾಯಕನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next