Advertisement

ಯಲಬುರ್ಗಾ: ಕೆಂಪುಕೆರೆ ಬಳಿ ಪಲ್ಟಿಯಾದ ಕೆಎಸ್ ಆರ್ ಟಿಸಿ ಬಸ್

03:54 PM Jun 19, 2020 | keerthan |

ಕೊಪ್ಪಳ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಒಂದು ಪಲ್ಟಿಯಾದ ಘಟನೆ ಯಲಬುರ್ಗಾ ತಾಲೂಕಿನ ಕೆಂಪು ಕೆರೆ ಬಳಿ ಶುಕ್ರವಾರ ನಡೆದಿದೆ.

Advertisement

ಘಟನೆಯಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗುತ್ತಿದೆ. ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಯಾವುದೇ ಪ್ರಾಣಾಪಾಯದ ಸಂಭವಿಸಿಲ್ಲ.

ಕೊಪ್ಪಳದಿಂದ ಯಲಬುರ್ಗಾ ಮುಖಾಂತರ ಗಜೇಂದ್ರಗಡಕ್ಕೆ ಹೋಗಬೇಕಿದ್ದ ಬಸ್ ಕೆಂಪು ಕೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಪಲ್ಟಿಯಾಗಿದೆ ಎನ್ನಲಾಗಿದೆ.

ಬಸ್ಸಿನಲ್ಲಿ 20 ಜನರು ಪ್ರಯಾಣಿಸುತ್ತಿದ್ದರು ಹತ್ತು ಜನರಿಗೆ ಸಣ್ಣಪುಟ್ಟ ಗಾಯವಾಗಿವೆ. ಕೆಂಪು ಕೆರೆ ಬಳಿ ತಡೆಗೋಡೆ ನಿರ್ಮಾಣ ಮಾಡದೇ ಇರುವುದು ಈ ಅವಘಡಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆದಷ್ಟು ಬೇಗ ತಡೆಗೋಡೆ ನಿರ್ಮಾಣ ಮಾಡಿಬೇಕು ಎಂದು ಆಗ್ರಹಿಸಿದ್ದಾರೆ.

Advertisement

ಘಟನಾ ಸ್ಥಳಕ್ಕೆ ಯಲಬುರ್ಗಾ ಪೊಲೀಸರು , ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next