Advertisement

ವೈಷ್ಣೋದೇವಿಯಿಂದ ಕತ್ರಾಕ್ಕೆ ತೆರಳುತ್ತಿದ್ದ ಬಸ್‌ಗೆ ಬೆಂಕಿ: 4 ಸಾವು, ಹಲವರಿಗೆ ಗಾಯ

08:22 PM May 13, 2022 | Team Udayavani |

ಜಮ್ಮು: ಕತ್ರಾದ ನಮೈ ಪ್ರದೇಶದಲ್ಲಿ ಜಮ್ಮುವಿಗೆ ತೆರಳುತ್ತಿದ್ದ ಬಸ್ ನಲ್ಲಿ ಶುಕ್ರವಾರ ಅನುಮಾನಾಸ್ಪದವಾಗಿ ಬೆಂಕಿ ಅವಘಡ ಸಂಭವಿಸಿದ್ದು 4 ಮಂದಿ ಸಾವನ್ನಪ್ಪಿದ್ದು, 22 ಮಂದಿ ಗಾಯಗೊಂಡಿದ್ದಾರೆ.

Advertisement

ಕತ್ರಾದಿಂದ ಜಮ್ಮುವಿಗೆ ತೆರಳುತ್ತಿದ್ದ ಬಸ್ ಕತ್ರಾದಿಂದ ಸುಮಾರು 3 ಕಿಲೋಮೀಟರ್ ದೂರದಲ್ಲಿರುವ ನೋಮೈ ಬಳಿ ಬೆಂಕಿ ಹೊತ್ತಿಕೊಂಡಿದೆ ಎಂದು ಪಿಟಿಐ ವರದಿ ಮಾಡಿದೆ.

ವೈಷ್ಣೋ ದೇವಿ ದೇಗುಲಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಕತ್ರಾ ಮೂಲ ಶಿಬಿರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾವುಗಳನ್ನು ಖಚಿತಪಡಿಸಿದ ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಮುಖೇಶ್ ಸಿಂಗ್, ಆರಂಭಿಕ ತನಿಖೆಯು ಯಾವುದೇ ಸ್ಫೋಟಕವನ್ನು ಬಳಸಿರುವುದನ್ನು ಸೂಚಿಸುವುದಿಲ್ಲ ಎಂದು ಪಿಟಿಐ ವರದಿ ಮಾಡಿದೆ. ಫೋರೆನ್ಸಿಕ್ ತಂಡ ಬೆಂಕಿಯ ಕಾರಣವನ್ನು ಪರಿಶೀಲಿಸುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next