Advertisement

Thekkatte ಖಾಸಗಿ ಬಸ್‌ ಢಿಕ್ಕಿ; ವ್ಯಕ್ತಿ ಸ್ಥಳದಲ್ಲೇ ಸಾವು

11:26 PM May 27, 2024 | Team Udayavani |

ತೆಕ್ಕಟ್ಟೆ: ಇಲ್ಲಿನ ತೆಕ್ಕಟ್ಟೆ ಕನ್ನುಕೆರೆ ರಾ.ಹೆ. 66ರ ಪ್ರಸಿಡೆಂಟ್‌ ಕನ್ವೆನ್ಶನ್‌ ಸಭಾಂಗಣದ ಸಮೀಪ ಖಾಸಗಿ ಬಸ್ಸೊಂದು ಪಾದಚಾರಿಗೆ ಢಿಕ್ಕಿಯಾಗಿದೆ. ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ರವಿವಾರ ರಾತ್ರಿ 7.30ರ ಸುಮಾರಿಗೆ ಸಂಭವಿಸಿದೆ.

Advertisement

ರಾಮ ಮಡಿವಾಳ ಕನ್ನುಕೆರೆ (59) ಮೃತ ವ್ಯಕ್ತಿ. ಅವರು ರಸ್ತೆ ಬದಿಯಲ್ಲಿ ಕನ್ನುಕೆರೆಯ ನಿವಾಸಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಉಡುಪಿಯಿಂದ ಕುಂದಾಪುರದ ಕಡೆಗೆ ಅತೀ ವೇಗದಿಂದ ಸಾಗುತ್ತಿದ್ದ ಖಾಸಗಿ ಬಸ್‌ ಹಿಂದಿನಿಂದ ಬಂದು ಢಿಕ್ಕಿ ಹೊಡೆದಿದೆ.

ಪರಿಣಾಮ ತಲೆಗೆ ಗಂಭೀರವಾದ ಗಾಯಗಳಾಗಿ ಅವರು ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಮೃತ ರಾಮ ಮಡಿವಾಳ ಅವರು ಹಾಲಾಡಿಯ ಹೆಂಚಿನ ಕಾರ್ಖಾನೆಯಲ್ಲಿ ಹಲವು ವರ್ಷಗಳಿಂದಲೂ ಕಾರ್ಮಿಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಘಟನೆ ಸಂಭವಿಸುತ್ತಿದ್ದಂತೆ ಕೋಟ ಪೊಲೀಸ್‌ ಠಾಣಾಧಿಕಾರಿ ತೇಜಸ್ವಿ ಅವರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next