Advertisement

ಬಸ್- ಬೈಕ್ ನಡುವೆ ರಸ್ತೆ ಅಪಘಾತ: ಆರ್ ಎಸ್ಎಸ್ ಮುಖಂಡ ಸಾವು

03:56 PM Jan 24, 2021 | Team Udayavani |

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಭಾತಂಬ್ರಾ ರಸ್ತೆಯಲ್ಲಿ ರವಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರ್​ಎಸ್​ಎಸ್ ಹಿರಿಯ ಮುಖಂಡ ಸುಧಾಕರ ದೇಶಪಾಂಡೆ ಸಾವನ್ನಪ್ಪಿದ್ದಾರೆ.

Advertisement

ಬೈಕ್ ಹಾಗೂ ಸಾರಿಗೆ ಸಂಸ್ಥೆ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆರ್​ಎಸ್​ಎಸ್​ನ ವಿಭಾಗೀಯ ಪ್ರಮುಖ ಸುಧಾಕರ ದೇಶಪಾಂಡೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರ ಜತೆಯಲ್ಲೇ ಇದ್ದ ಮತ್ತೊಬ್ಬ ವ್ಯಕ್ತಿಗೆ ಗಾಯವಾಗಿದೆ. ಈ ಕುರಿತು ಭಾಲ್ಕಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹುಣಸೋಡು ಬ್ಲಾಸ್ಟ್ ಪ್ರಕರಣದ ತನಿಖೆ ಸಿಬಿಐಗೆ ವಹಿಸಲ್ಲ: ಆರ್.ಅಶೋಕ್

ದಶಕಗಳ ಕಾಲ ಹಿಂದೂ ಜಾಗರಣ ವೇದಿಕೆ, ವಿಶ್ವ ಹಿಂದು ಪರಿಷತ್ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಹಲವು ಕಾರ್ಯಗಳಲ್ಲಿ ಸುಧಾಕರ ದೇಶಪಾಂಡೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಇದನ್ನೂ ಓದಿ: ನಾನು ಶಾಸಕನಾಗಿದ್ದರೂ ಸಚಿವನಾಗಬೇಕೆಂಬ ಭ್ರಮೆ ಇಲ್ಲ: ರಾಮದಾಸ್‌

Advertisement
Advertisement

Udayavani is now on Telegram. Click here to join our channel and stay updated with the latest news.

Next