Advertisement

ಶಿಕ್ಷಣ ಸಂಸ್ಥೆಗಳಿಗೆ ಬಾಡಿಗೆ ಆಧಾರದಲ್ಲಿ ಬಸ್‌

09:52 AM May 12, 2017 | Team Udayavani |

ಶಹಾಪುರ (ಯಾದಗಿರಿ): ಬೆಂಗಳೂರು ಮಾತ್ರವಲ್ಲ, ರಾಜ್ಯಾದ್ಯಂತ ಶಾಲಾ – ಕಾಲೇಜುಗಳು ಬೇಡಿಕೆ ಸಲ್ಲಿಸಿದಲ್ಲಿ ಸಾರಿಗೆ ಸಂಸ್ಥೆ ಬಸ್‌ಗಳನ್ನು ಬಾಡಿಗೆ ರೂಪದಲ್ಲಿ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. 

Advertisement

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಕೇಳಿದರೂ ಸಹಕರಿಸಲಾಗುವುದು.

ಆಯಾ ಸಾರಿಗೆ ಸಂಸ್ಥೆ ನಿಗದಿ ಮಾಡಿದ ಬಾಡಿಗೆ ಪಾವತಿಸಬೇಕಾಗುತ್ತದೆ ಎಂದರು. ಹೈಕ ಭಾಗಕ್ಕೆ ಕಡಿಮೆ ಸಂಖ್ಯೆಯಲ್ಲಿ ಹೊಸ ಬಸ್‌ ನೀಡಲಾಗಿದೆ. ಈ ಭಾಗದಲ್ಲಿ ಸಾಕಷ್ಟು ಹಳೆಯದಾದ ಬಸ್‌ಗಳಿವೆ ಎಂಬ ಪ್ರಶ್ನೆಗೆ, ಹಾಗೇನೂ ಇಲ್ಲ. ಆಯಾ ಸಂಸ್ಥೆಗಳ ಬೇಡಿಕೆಯಂತೆ ಬಸ್‌ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next