Advertisement

ಬಸ್‌ ಪಲ್ಟಿ: 8 ಮಂದಿಗೆ ಗಾಯ

01:42 PM Apr 02, 2017 | Harsha Rao |

ಪಡುಬಿದ್ರಿ: ಜೆಸಿಬಿ ಬಸ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬಸ್‌ ಪಲ್ಟಿಯಾಗಿ ಎಂಟು ಮಂದಿಬಸ್‌ ಪ್ರಯಾಣಿಕರು ಗಂಭೀರವಾಗಿ ಗಾಯ ಗೊಂಡ ಘಟನೆ ಕಣ್ಣಂಗಾರ್‌ ಬೈಪಾಸ್‌ ಬಳಿ ಶನಿವಾರ ರಾತ್ರಿ ಸಂಭವಿಸಿದೆ. 

Advertisement

ಮಂಗಳೂರಿನಿಂದ ಉಡುಪಿಯತ್ತ ತೆರಳುತ್ತಿದ್ದ ಖಾಸಗಿ ಎಕ್ಸ್‌ಪ್ರಸ್‌ ಬಸ್‌ಗೆ ಪಡುಬಿದ್ರಿಯಿಂದ ಹೆಜಮಾಡಿಯತ್ತ ಹೋಗುತ್ತಿದ್ದ ಜೆಸಿಬಿ ಢಿಕ್ಕಿ ಹೊಡೆಯಿತು. ಬಸ್‌ ಪಲ್ಟಿಯಾಗಿ ನಜ್ಜುಗುಜ್ಜಾಗಿದೆ. ಬಸ್‌ನಲ್ಲಿದ್ದ 25 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ಇತರ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸಾರ್ವಜನಿಕರ ನೆರವಿನಿಂದ ಸರಕಾರಿ ಮತ್ತು ಖಾಸಗಿ ಆ್ಯಂಬುಲೆನ್ಸ್‌ಗಳ ಮೂಲಕ ಆಸ್ಪತ್ರೆಗಳಿಗೆ ದಾಖಲಿಸಲಾಯಿತು.
ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next