Advertisement

ನಾಳೆಯಿಂದ ಆಂಧ್ರಕ್ಕೆ ಬಸ್‌ ಸಂಚಾರ

12:04 PM Jun 16, 2020 | Suhan S |

ರಾಯಚೂರು: ಆಂಧ್ರಪ್ರದೇಶದ ವ್ಯಾಪ್ತಿಯಲ್ಲಿ ಜೂ.17ರಿಂದ ಕೆಲ ಷರತ್ತುಗಳೊಂದಿಗೆ ಬಸ್‌ ಸಂಚಾರ ಪ್ರಾರಂಭವಾಗಲಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರಾಯಚೂರು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Advertisement

ಲಾಕ್‌ಡೌನ್‌ ಸಡಿಲಿಕೆ ಬಳಿಕ ತಾಲೂಕಿನಿಂದ ಜಿಲ್ಲಾ ಕೇಂದ್ರಕ್ಕೆ ನಂತರ ಅಂತರ್‌ ಜಿಲ್ಲೆಗಳಿಗೆ ಬಸ್‌ ಸಂಚಾರ ಪ್ರಾರಂಭಿಸಲಾಗಿದೆ. ಜನಸಂದಣಿ ಅನುಗುಣವಾಗಿ ಹಂತ ಹಂತವಾಗಿ ಬಸ್‌ ಸಂಚಾರ ಹೆಚ್ಚಿಸಲಾಗುವುದು. ಮಾರ್ಗ ಮಧ್ಯದಲ್ಲಿ ಎಲ್ಲಿಯೂ ಬಸ್‌ಗಳನ್ನು ನಿಲ್ಲಿಸುವುದಿಲ್ಲ. ಪ್ರಯಾಣಿಕರು ಆಸನಗಳನ್ನು ಮುಂಗಡವಾಗಿ ಕಾಯ್ದಿರಿಸಕೊಳ್ಳಬಹುದು. ಪ್ರಯಾಣಿಕರ ಮಾಹಿತಿಯನ್ನು ಕಡ್ಡಾಯವಾಗಿ ಪಡೆಯಲಾಗುವುದು. ವಾಹನದ ಒಳಗಡೆ ಕಡ್ಡಾಯವಾಗಿ ಪ್ರಯಾಣಿಕರು ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್‌ ವ್ಯವಸ್ಥೆ ಮಾಡಿಕೊಳ್ಳಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ರಾಯಚೂರಿನಿಂದ ಮಂತ್ರಾಲಯ ಮಾರ್ಗವಾಗಿ, ಮೊದಲಿನಂತೆ ಇದ್ದ ಪ್ರತಿಷ್ಠಿತ ಸಾರಿಗೆ ಬಸ್‌ ಹಾಗೂ ದಿನದ ಸಮಯದಲ್ಲಿ ವೇಗದೂತ ಬಸ್‌ಗಳು ಸಂಚರಿಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next