Advertisement

ಬಸ್‌ ನಿಲ್ದಾಣ ತಾತ್ಕಾಲಿಕ ಸ್ಥಳಾಂತರಕ್ಕೆ ಅಡ್ಡಿ

06:18 PM Nov 09, 2019 | Suhan S |

ತುಮಕೂರು: ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳು ತ್ವರಿತವಾಗಿ ಪೂರ್ಣಗೊಳ್ಳದ ಕಾರಣ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ತಾತ್ಕಾಲಿಕ ಸ್ಥಳಾಂತರಕ್ಕೆ ಅಡ್ಡಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ತಿಳಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಎಸ್‌ಆರ್‌ಟಿಸಿ, ಸ್ಮಾರ್ಟ್‌ ಸಿಟಿ, ಮಹಾನಗರ ಪಾಲಿಕೆ ಹಾಗೂ ಪೊಲೀಸ್‌ ಅಧಿಕಾರಿಗಳೊಂದಿಗೆ ಹೈಟೆಕ್‌ ಬಸ್‌ ನಿಲ್ದಾಣವನ್ನಾಗಿ ನಿರ್ಮಿಸುವ ಕಾಮಗಾರಿ ಆರಂಭವಾಗುತ್ತಿರುವ ಹಿನ್ನೆಲೆ ಯಲ್ಲಿ ಜೆಸಿ ರಸ್ತೆಯಲ್ಲಿರುವ ಕೆಎಸ್‌ಆರ್‌ ಟಿಸಿ ಘಟಕ-1ರ ಸ್ಥಳಕ್ಕೆ ಸ್ಥಳಾಂತರಿಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ನ. 8ರೊಳೆಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ನಿಲ್ದಾಣ ಸಂದಿಸುವ ರಸ್ತೆಗಳ ಸ್ವತ್ಛತೆಗೆ ಹೆಚ್ಚುವರಿ ಪೌರಕಾರ್ಮಿಕರ ನಿಯೋಜಿಸ ಬೇಕು. ಬಸ್‌ ನಿಲ್ದಾಣದ ಸ್ಥಳಾಂತರ ಹಾಗೂ ಬದಲಾದ ರಸ್ತೆ ಮಾರ್ಗದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು 30 ಸೆಕೆಂಡ್‌ ಅವಧಿ ವಿಡೀಯೋ ತುಣುಕು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next