Advertisement

ನಡು ರಸ್ತೆಯಲ್ಲೇ ಕೆಟ್ಟು ನಿಂತ ಬಸ್‌

01:31 PM Aug 23, 2018 | |

ಈಶ್ವರಮಂಗಲ: ಸುಳ್ಯಪದವಿನಿಂದ ಬೆಳಗ್ಗೆ ಈಶ್ವರಮಂಗಲ ಮೂಲಕ ಪುತ್ತೂರಿಗೆ ತೆರಳುತ್ತಿದ್ದ ಸರಕಾರಿ ಬಸ್‌ ತಾಂತ್ರಿಕ ತೊಂದರೆಯಿಂದಾಗಿ ಮೀನಾವು ಸಮೀಪ ನಡು ರಸ್ತೆಯಲ್ಲಿಯೇ ನಿಂತಿತ್ತು. ಪರಿಣಾಮ ಸುಮಾರು 2 ಗಂಟೆ ವಾಹನ ಸಂಚಾರಕ್ಕೆ ತೊಡಕುಂಟಾಯಿತು.

Advertisement

ಬಸ್‌ ರಸ್ತೆ ಮಧ್ಯೆ ಬಾಕಿಯಾಗಿದ್ದರಿಂದ ಉಳಿದ ವಾಹನಗಳು ಅನ್ಯ ದಾರಿಯ ಮೂಲಕ ತೆರಳಿದವು. ಶಾಲೆ, ಕಾಲೇಜು, ಸರಕಾರಿ ಕಚೇರಿಗಳಿಗೆ ರಜಾದಿನ ಆಗಿದ್ದರಿಂದ ಹೆಚ್ಚಿನ ತೊಂದರೆಯಾಗಿಲ್ಲ. ಎರಡು ತಾಸುಗಳ ಬಳಿಕ ತಾಂತ್ರಿಕ ದೋಷ ಸರಿಪಡಿಲಾಗಿದ್ದು, ವಾಹನ ಸಂಚಾರ ಪುನರಾರಂಭಗೊಂಡಿತು. 

Advertisement

Udayavani is now on Telegram. Click here to join our channel and stay updated with the latest news.

Next