Advertisement

ರಾಜಸ್ಥಾನ : ಟ್ಯಾಂಕರ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್, ಹನ್ನೆರಡು ಮಂದಿ ಸಜೀವ ದಹನ

03:09 PM Nov 10, 2021 | Team Udayavani |

ರಾಜಸ್ಥಾನ : ಟ್ಯಾಂಕರೊಂದು ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಬಸ್ಸಿನಲ್ಲಿದ್ದ ಹನ್ನೆರಡು ಮಂದಿ ಸಜೀವ ದಹನಗೊಂಡ ಘಟನೆ ರಾಜಸ್ಥಾನದ ಬಾರ್ಮರ್ – ಜೋಧ್ ಪುರ ಹೆದ್ದಾರಿಯಲ್ಲಿ ಸಂಭವಿಸಿದ್ದು ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ.

Advertisement

ವರದಿಗಳ ಪ್ರಕಾರ ಬಸ್ಸಿನಲ್ಲಿ ಸುಮಾರು ಇಪ್ಪತ್ತೈದು ಮಂದಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಘಟನೆ ನಡೆದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಹಾಗೂ ರಕ್ಷಣಾ ಸಿಬ್ಬಂದಿಗಳು ಬಸ್ಸಿನಲ್ಲಿದ್ದ ಹತ್ತು ಮೃತ ದೇಹಗಳನ್ನು ಹೊರತೆಗೆದಿದ್ದಾರೆ.

ಟ್ಯಾಂಕರ್ ಗುದ್ದಿದ ರಭಸಕ್ಕೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಹೊರಬರಲಾಗದೆ ಪರದಾಡುವಂತಾಯಿತು ಇದೆ ವೇಳೆ ಬಸ್ಸಿಗೆ ಬೆಂಕಿ ಆವರಿಸಿಕೊಂಡಿದೆ ಇದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ, ಈ ವೇಳೆ ಕೆಲವರು ಕಿಟಕಿ ಗಾಜು ಒಡೆದು ಹೊರ ಜಿಗಿದಿದ್ದಾರೆ.

ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.

ಇದನ್ನೂ ಓದಿ : ಸಕ್ರೆಬೈಲು ಆನೆ ಬಿಡಾರದಲ್ಲಿರುವ ಮರಿಯಾನೆಗೆ ‘ಪುನಿತ್’ ಎಂದು ಹೆಸರನ್ನಿಟ್ಟ ಅರಣ್ಯ ಇಲಾಖೆ

Advertisement

Advertisement

Udayavani is now on Telegram. Click here to join our channel and stay updated with the latest news.

Next