Advertisement

ಬಳ್ಳಾರಿ: ಬಸ್‌ ಟೈರ್‌ ಸ್ಫೋಟಗೊಂಡು ಬೈಕ್‌ಗಳಿಗೆ ಢಿಕ್ಕಿ; 3 ಸಾವು 

04:05 PM Apr 01, 2017 | Team Udayavani |

ಹೂವಿನ ಹಡಗಲಿ: ಇಲ್ಲಿನ ಮೈಲಾರ ಬಳಿ ಕೆಎಸ್‌ಆರ್‌ಟಿಸಿ ಬಸ್‌ನ ಟೈರ್‌ ಸ್ಫೋಟಗೊಂಡು ಸರಣಿ ಅಪಘಾತ ಸಂಭವಿಸಿ ಮೂವರು ದಾರುಣವಾಗಿ ಸಾವನ್ನಪ್ಪಿದ ದುರ್ಘ‌ಟನೆ ಶನಿವಾರ ಸಂಭವಿಸಿದೆ.

Advertisement

ಟಯರ್‌ ಸ್ಫೋಟಗೊಂಡು ಎದುರಿನಿಂದ ಬರುತ್ತಿದ್ದ ಎರಡು ಬೈಕ್‌ಗಳಿಗೆ ಢಿಕ್ಕಿಯಾಗಿದೆ. ಪರಿಣಾಮವಾಗಿ ಒಂದು ಬೈಕ್‌ನಲ್ಲಿ ತಂದೆ ಮಗಳು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಂದು ಬೈಕ್‌ನಲ್ಲಿದ್ದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ.

ಹೊನ್ನಪ್ಪ(48)ಮತ್ತು ಪುತ್ರಿ ನಂದಾ(20) ಸ್ಥಳದಲ್ಲೇ ಸಾವನ್ನಪ್ಪಿದರೆ, ಮಹಾಂತೇಶ್‌ (38) ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ.

ಘಟನೆ ನಡೆದ ಕೂಡಲೇ ಬಸ್‌ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಹಿರೇಹಡಗಲಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next