Advertisement

ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಪಲ್ಟಿ, ಹಲವರಿಗೆ ಗಾಯ

12:50 PM Nov 22, 2020 | keerthan |

ವಿಟ್ಲ: ದಕ್ಷಿಣ ಕನ್ನಡ ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಮಧ್ಯರಾತ್ರಿ ಅಪಘಾತಕ್ಕೀಡಾಗಿದೆ. ಹಾಸನ- ಬೆಂಗಳೂರು ಮಾರ್ಗಮಧ್ಯೆ ಈ ದುರ್ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಪಲ್ಟಿಯಾಗಿದ್ದು ರಸ್ತೆಯಿಂದ ಕೆಳಕ್ಕೆ ಉರುಳಿದೆ.

Advertisement

ಬಸ್ ಪಲ್ಟಿ ಹೊಡೆದ ತೀವ್ರತೆಗೆ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ಸಿನಲ್ಲಿ 29 ಮಂದಿ ಪ್ರಯಾಣಿಕರು ಮುಂಗಡ ಟಿಕೆಟ್ ಕಾಯ್ದಿರಿಸಿ ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರಿಗೆ ಈವರೆಗೆ ಪ್ರಜ್ಞೆ ಬಂದಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಎಚ್ಚರ: ಬಾಯಾರಿ ಬಂದನೆಂದು ನೀರು ಕೊಟ್ಟ ಮಹಿಳೆ.. ಕತ್ತಿಗೆ ಕೈ ಹಾಕಿ ಸರ ಎಳೆದ ವಂಚಕ!

ಬಸ್ ಶನಿವಾರ ರಾತ್ರಿ ವಿಟ್ಲದಿಂದ ಬೆಂಗಳೂರಿಗೆ ಹೊರಟಿತ್ತು. ಕೆಲವರಷ್ಟೇ ಅಪಾಯದಿಂದ ಪಾರಾಗಿದ್ದು, ಇವರನ್ನು ಪರ್ಯಾಯ ವಾಹನಗಳಲ್ಲಿ ಬೆಂಗಳೂರಿಗೆ ತಲುಪಿಸಲಾಗಿದೆ. ಗಾಯಾಳುಗಳು ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ಸಿನಲ್ಲಿ ವಿಟ್ಲ, ಪುತ್ತೂರು, ಉಪ್ಪಿನಂಗಡಿ ಆಸುಪಾಸಿನವರು ಇದ್ದರು ಎಂದು ತಿಳಿದುಬಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next