Advertisement

ತುಮಕೂರು: ಲಾರಿ-ಖಾಸಗಿ ಬಸ್ ನಡುವೆ ಡಿಕ್ಕಿ: ಮೂವರ ದುರ್ಮರಣ, ಹಲವು ಮಂದಿಗೆ ಗಾಯ

09:58 AM Nov 04, 2019 | Mithun PG |

ತುಮಕೂರು: ಖಾಸಗಿ ಬಸ್​ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಬಸ್ಸಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶಿರಾ ರಾಷ್ಟ್ರೀಯ ಹೆದ್ದಾರಿಯ(48) ಊರುಕೆರೆ ಗ್ರಾಮದಲ್ಲಿ  ನಡೆದಿದೆ.

Advertisement

ಸೋಪು ತುಂಬಿಕೊಂಡು ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಲಾರಿ ತೆರಳುತ್ತಿತ್ತು. ಈ ವೇಳೆ ಖಾಸಗಿ ಬಸ್  ಡಿಕ್ಕಿಯಾದ ರಭಸಕ್ಕೆ ಲಾರಿ ಪಲ್ಟಿಯಾಗಿ ರಸ್ತೆ ತುಂಬಾ ಸೋಪುಗಳು ಬಿದ್ದಿವೆ. ಬಸ್ ನಲ್ಲಿದ್ದ ಮೂವರು  ಮೃತರಾದರೆ, ಹಲವು ಮಂದಿ ಗಾಯಗೊಂಡಿದ್ದಾರೆ.

ಲಾರಿ ಚಾಲಕ ಮತ್ತು ಕ್ಲೀನರ್ ಗಂಭಿರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲು  ಮಾಡಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next