Advertisement

ಉತ್ತರಾಖಂಡ : ಕಂದಕಕ್ಕೆ ಉರುಳಿದ ಮದುವೆ ದಿಬ್ಬಣದ ಬಸ್, 25 ಮಂದಿ ಸಾವು, ಹಲವರಿಗೆ ಗಾಯ!

07:47 AM Oct 05, 2022 | Team Udayavani |

ಡೆಹ್ರಾಡೂನ್ : ಮದುವೆ ದಿಬ್ಬಣದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಸುಮಾರು 25 ಮಂದಿ ಪ್ರಯಾಣಿಕರು ಸಾವನ್ನಪ್ಪಿ ಹಲವರು ಗಂಭೀರ ಗಾಯಗೊಂಡ ಘಟನೆ ಉತ್ತರಾಖಂಡ್‌ನ ಪೌರಿ ಗಡ್ವಾಲ್‌ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

Advertisement

ಬಸ್ಸಿನಲ್ಲಿ ಸುಮಾರು ನಲ್ವತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದಾರೆಂದು ಹೇಳಲಾಗಿದೆ, ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ಧಾವಿಸಿ ರಾತ್ರೋರಾತ್ರಿ 21 ಜನರನ್ನು ರಕ್ಷಿಸಿದ್ದಾರೆ, ಅಲ್ಲದೆ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ಸುದ್ದಿಗೆ ತಿಳಿಸಿದ್ದಾರೆ.

ಮದುವೆ ಸಮಾರಂಭ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ಸು ಸುಮಾರು 500 ಮೀಟರ್ ಆಳದ ಉರುಳಿ ಬಿದ್ದು ಅವಘಡ ಸಂಭವಿಸಿದೆ.

ದುರಂತದಲ್ಲಿ ಸಾವಿಗೀಡಾದವರಿಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next