Advertisement

ಪುತ್ತೂರು: ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಉದ್ಯಮಿ ಸಾವು!

03:22 PM Dec 25, 2020 | keerthan |

ಪುತ್ತೂರು: ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ಡಿ.25 ರಂದು ಪುತ್ತೂರು ಅಜ್ಜಿಕಲ್ಲು ಎಂಬಲ್ಲಿ ನಡೆದಿದೆ.

Advertisement

ಅಜ್ಜಿಕಲ್ಲು ನಿವಾಸಿ ಬಾಬು‌ ಪೂಜಾರಿ ಅವರ ಪುತ್ರ ಮಂಗಳೂರು ಬಿಜೈಯಲ್ಲಿ ಜೆ.ಡಿ.ಎ. ಇನ್ಫೋಟೆಕ್ ಸಂಸ್ಥೆಯ ಮಾಲಕ ರವೀಂದ್ರ ಪೂಜಾರಿ (34) ವಿದ್ಯುತ್ ಪ್ರವಹಿಸಿ ಮೃತಪಟ್ಟವರು.

ಕ್ರಿಸ್ ಮಸ್ ರಜಾ ಅವಧಿಯಲ್ಲಿ ಅಜ್ಜಿಕಲ್ಲು ಮನೆಗೆ ಬಂದವರು ಮನೆಯ ತೋಟದಲ್ಲಿ ಅಡಿಕೆ ಮರ ಏರಿ ಕೊಕ್ಕೆಯ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಗೊಂಡು ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಚಿಕ್ಕಮಗಳೂರು: ಬ್ರಿಟನ್ ನಿಂದ ಆಗಮಿಸಿದ ಇಬ್ಬರಿಗೆ ಕೋವಿಡ್ ಪಾಸಿಟಿವ್!

ಮೃತದೇಹ ಇಡಲಾಗಿದ್ದ ಪುತ್ತೂರು ಸರಕಾರಿ ಆಸ್ಪತ್ರೆಗೆ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next