Advertisement

ಬಂಟ್ವಾಳ: ಚೀಟಿಯಲ್ಲಿ ಸಾಲಬಾಧೆಯ ಕಾರಣ ಬರೆದು ಉದ್ಯಮಿ ಆತ್ಮಹತ್ಯೆ

03:20 PM Dec 19, 2021 | Team Udayavani |

ಬಂಟ್ವಾಳ: ಸಾಲದ ಬಾಧೆ ಎಂಬ ಕಾರಣಕ್ಕಾಗಿ ಚೀಟಿ ಬರೆದು  ಉದ್ಯಮಿಯೋರ್ವರು ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆದಿತ್ಯವಾರ ಬೆಳಕಿಗೆ ಬಂದಿದೆ.

Advertisement

ಕನಪಾದೆ ನಿವಾಸಿ ಕೃಷ್ಣ ಟಿ. ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಬಿಸಿರೋಡಿನ ಖಾಸಗಿ ಹೋಟೆಲ್ ನ ರೂಮ್ ನಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಐಸ್ ಕ್ರೀಂ ಒಂದರ  ಮಾಲಕರಾಗಿದ್ದು ಜೊತೆಗೆ ಕ್ಲಬ್ ಕೂಡಾ ನಡೆಸುತ್ತಿದ್ದರು ಎಂದು ಹೇಳಲಾಗಿದೆ. ಉದ್ಯಮ ದಲ್ಲಿ ನಷ್ಟವಾಗಿದ್ದು, ಸಾಲದಬಾಧೆಯಿಂದ ಬಳಲುತ್ತಿದ್ದರು ಎಂಬ ಕಾರಣವನ್ನು ಚೀಟಿಯಲ್ಲಿ ಬರೆದು ಕಿಸೆಯಲ್ಲಿಟ್ಟಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಎಸ್‌ಐ.ಅವಿನಾಶ್  ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next