Advertisement

ಮಣಿಪಾಲ: ರಸ್ತೆ ಅಪಘಾತದಲ್ಲಿ‌ ಗಂಭೀರ ಗಾಯಗೊಂಡಿದ್ದ ಉದ್ಯಮಿ ಸಾವು

05:46 PM May 29, 2021 | Team Udayavani |

ಮಣಿಪಾಲ: ಕೆಳಪರ್ಕಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದ ರಸ್ತೆ ಅಪಘಾತದಲ್ಲಿ‌ ಗಂಭೀರವಾಗಿ ಗಾಯಗೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಇಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement

ಮೃತರನ್ನು ಉದ್ಯಮಿ ಮಣಿಪಾಲ ನಿವಾಸಿ ವಾಮನ ನಾಯಕ್ (58) ಎಂದು ಗುರುತಿಸಲಾಗಿದೆ. ವಾಮನ್ ಅವರು ಸ್ಕೂಟರ್‌ನಲ್ಲಿ ಮೇ 28ರಂದು ಕೆಳಪರ್ಕಳ ಕಡೆ ಹೋಗುತ್ತಿರುವಾಗ ಟೆಂಪೊ ಚಾಲಕನೋರ್ವ ಅತೀ ವೇಗವಾಗಿ ಬಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ವಾಮನ್ ನಾಯ್ಕ್ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ : ಮದುವೆಗೆ ಲಾಕ್ ಡೌನ್ ಅಡ್ಡಿ ; ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮದುಮಗಳು.!

ಮೃತರು ಪತ್ನಿ ಕೆಎಂಸಿ ಆಸ್ಪತ್ರೆಯ ಉದ್ಯೋಗಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ವಾಮನ ನಾಯ್ಕ್ ಅವರು ಹಣಕಾಸಿನ ವ್ಯವಹಾರ, ರಿಯಲ್ ಎಸ್ಟೇಟ್ ವ್ಯವಹಾರಗಳನ್ನು ನಡೆಸುತ್ತಿದ್ದರು. ಹೀಗಾಗಿ ಅವರ ಆಪ್ತರು ಅಪಘಾತದ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next