Advertisement
ಬದಲಿಗೆ ಬೆಂಗಳೂರಿನಲ್ಲಿ ಈಗಾಗಲೇ ನಿರ್ಮಿಸಿರುವ ಟೆಂಡರ್ಶ್ಯೂರ್ ರಸ್ತೆಯ ಮಾದರಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಮತ್ತು ದೂರದೃಷ್ಟಿಯನ್ನಿಟ್ಟುಕೊಂಡು ನಿರ್ಮಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ತಿಳಿಸಿದ್ದಾರೆ.
Related Articles
Advertisement
ಒಳ ರಸ್ತೆಗಳ ಅಭಿವೃದ್ಧಿ: ಹೆಬ್ಬಳ್ಳಿ ಅಗಸಿಯಿಂದ ಮುರುಘಾ ಮಠದ ವರೆಗೆ ಮಾತ್ರವಲ್ಲ, ಈ ಪ್ರದೇಶದ ಅನೇಕ ಸಣ್ಣ ರಸ್ತೆಗಳನ್ನು ಪರಿಪೂರ್ಣವಾಗಿ ನಿರ್ಮಿಸಲಾಗುತ್ತಿದೆ. ಹೀಗಾಗಿ ಇಲ್ಲಿ ಸಂಚಾರ ದಟ್ಟಣೆ ತೊಂದರೆ ಕಡಿಮೆಯಾಗಲಿದೆ.
ಹೆಬ್ಬಳ್ಳಿ ಅಗಸಿಯಿಂದ ಶಿವಾಜಿ ವೃತ್ತದ ವರೆಗಿನ ರಸ್ತೆ ಅಗಲೀಕರಣ ಅನಿವಾರ್ಯವಾಗಿದ್ದು, ಇಲ್ಲಿ ಮನೆಗಳನ್ನು ತೆಗೆಯಬೇಕಾಗಿದೆ. ಇದಕ್ಕಾಗಿ 70 ಕೊಟಿ ರೂ. ಅಗತ್ಯವಿದೆ. ಈ ಕುರಿತು ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ. ರಿಂಗ್ ರಸ್ತೆಯ ಅಭಿವೃದ್ಧಿಗೂ ಗಮನ ಹರಿಸಲಾಗುವುದು ಎಂದರು.
ಹಂದಿ ಕಾರ್ಯಾಚರಣೆಗೆ ಸದ್ಯಕ್ಕೆ ಭದ್ರತೆಗಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತಿಲ್ಲ. ಬೆಳಗಾವಿ ಅಧಿವೇಶನ ಮುಗಿದ ನಂತರ ಪೊಲೀಸರು ಭದ್ರತೆ ನೀಡಲಿದ್ದು, ನಂತರ ಮತ್ತೆ ಕಾರ್ಯಾಚರಣೆ ಚುರುಕುಗೊಳಿಸಲಾಗುವುದು ಎಂದರು. ಹೊಸ್ ಬಸ್ ನಿಲ್ದಾಣದಲ್ಲಿ ಸಾಕಷ್ಟು ಗುಂಡಿಗಳು ಬಿದ್ದಿದ್ದು ಗಮನಕ್ಕೆ ಬಂದಿದೆ. ಕೆಲವೇ ದಿನಗಳಲ್ಲಿ ಇದನ್ನು ಡಾಂಬರೀಕರಣ ಮಾಡಲಾಗುವುದು ಎಂದರು.
ಶಿವಳ್ಳಿ ಬಳಿ ಈಗಾಗಲೇ ಕಾರ್ಯರೂಪಕ್ಕೆ ತರಲು ಸಜ್ಜಾಗಿರುವ ಕಸ ವಿಲೇವಾರಿ ಘಟಕಕ್ಕೆ ಮತ್ತೆ 60 ಕೋಟಿ ರೂ. ಮಂಜೂರಾಗಿದೆ. ಅಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಗ್ರಾಮಸ್ಥರು ಒಪ್ಪದೇ ಹೋದರೆ ಅವರ ಮನವೊಲಿಸಿ ನಂತರ ಕಸ ಹಾಕುತ್ತೇವೆ ಎಂದು ಸಚಿವರು ಹೇಳಿದರು.