Advertisement

5 ಲಕ್ಷ ಡೋಸ್‌ ಚುಚ್ಚು ಮದ್ದು ಖರೀದಿ

01:54 PM May 05, 2021 | Team Udayavani |

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರದ ವಶದಲ್ಲಿರುವ ಬೆಡ್‌ ದರ ಪರಿಷ್ಕರಣೆ, ಕೂಡಲೇ 5 ಲಕ್ಷ ರೆಮ್‌ಡೆಸಿವಿಯರ್‌ ಖರೀದಿ ಹಾಗೂ ಅಗತ್ಯವಿದ್ದಷ್ಟು ರಾಟ್‌ಕಿಟ್‌ಗಳನ್ನು ತಕ್ಷಣವೇ ಖರೀದಿ ಮಾಡುವ ಮಹತ್ವದ ನಿರ್ಧಾರಗಳನ್ನು ಕೋವಿಡ್‌ ಕಾರ್ಯಪಡೆಯ ಸಭೆಯಲ್ಲಿ ಮಂಗಳವಾರ ತೆಗೆದುಕೊಳ್ಳಲಾಗಿದೆ.

Advertisement

ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಕಾರ್ಯಪಡೆ ಸಭೆ ನಡೆಸಿ, ದೇಶಿಯ ಅಥವಾ ಜಾಗತಿಕವಾಗಿ ಯಾವುದೇ ಕಂಪನಿ ಆಗಿರಲಿ, ರೆಮ್‌ಡೆಸಿವಿಯರ್‌ ಖರೀದಿಗೆ ಜಾಗತಿಕ ಟೆಂಡರ್‌ ಕರೆದು, ಖರೀದಿಸಲು ಸೂಚನೆ ನೀಡಿದರು.

ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ರೆಮ್‌ಡೆಸಿವಿಯರ್‌ ಕೊರತೆ ಆಗಬಾರದು. ಕೂಡಲೇ 5 ಲಕ್ಷ ಡೋಸ್‌ ಆಮದು ಮಾಡಲು ಜಾಗತಿಕ ಟೆಂಡರ್‌ ಕರೆಯಬೇಕು. ಯಾವುದೇ ಕಂಪನಿಯಾದರೂ ಪರವಾಗಿಲ್ಲ. ವಿದೇಶದಿಂದ ಆಮದುಮಾಡಿಕೊಂಡರೂ ಸರಿ. ರೆಮಿಡೆಸಿವಿಯರ್‌ ಕೊರತೆಯಿಂದ ಜೀವ ಹೋಯಿತು ಎನ್ನುವ ಮಾತು ಇನ್ನು ಕೇಳಿಬರಬಾರದು.ಕೂಡಲೇ ಪ್ರಕ್ರಿಯೆ ಆರಂಭಿಸಲು ತಾಕೀತು ಮಾಡಿದರು.

ಗಂಭೀರವಲ್ಲದ ಕೋವಿಡ್‌ ಸೋಂಕಿತರ ಬೆಡ್‌ ದರ ಪ್ರತಿದಿನಕ್ಕೆಈಗ 5,200 ರೂ. ಇದ್ದು, ಇದರಲ್ಲಿ ಯಾವುದೇ ಹೆಚ್ಚಳ ಮಾಡಲಾಗಿಲ್ಲ. ಆಕ್ಸಿಜನ್‌ಯುಕ್ತ ಬೆಡ್‌ ದರವನ್ನು ದಿನಕ್ಕೆ 7,000 ದಿಂದ8,000 ರೂ.ಗಳಿಗೆ ಹೆಚ್ಚಿಸಲಾಗಿದೆ. ಐಸಿಯುನಲ್ಲಿ ವೆಂಟಿಲೇಟರ್‌ ಹೊರತಾದ ಬೆಡ್‌ ದರವನ್ನು 8,500ರಿಂದ 9,750 ರೂ.ಗಳಿಗೆ ಹಾಗೂ ಐಸಿಯುನಲ್ಲಿ ವೆಂಟಿಲೇಟರ್‌ ಸಹಿತ ಬೆಡ್‌ ದರವನ್ನು10,000ರಿಂದ 11,500 ರೂ.ಗಳಿಗೆ ಏರಿಸಲಾಗಿದೆ. ಹೊಸದರಗಳು ಯಾವಾಗಿನಿಂದ ಜಾರಿಗೆ ಬರುತ್ತವೆ ಎಂಬುದಕ್ಕೆಸರ್ಕಾರ ಶೀಘ್ರವೇ ಆದೇಶ ಹೊರಡಿಸಲಿದೆ ಎಂದರು.

ಗೂಂಡಾ ಕಾಯ್ದೆಯಡಿ ಕ್ರಮ: ಯಾವುದೇ ಖಾಸಗಿ ಆಸ್ಪತ್ರೆಬೆಡ್‌, ಔಷಧಿ, ಆಕ್ಸಿಜನ್‌, ರೆಮ್‌ಡೆಸಿವಿಯರ್‌ ಸೇರಿದಂತೆ ಸರಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚಿನ ಹಣ ಸುಲಿಗೆ ಮಾಡಿದರೆ ಗೂಂಡಾ ಕಾಯ್ದೆ ಅಡಿಯಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಿಮಿನಲ್‌ ಪ್ರಕರಣ ದಾಖಲು ಮಾಡಲಾಗುವುದು. ಖಾಸಗಿಆಸ್ಪತ್ರೆಗಳ ಬಿಲ್‌ ಬಾಕಿ ಇದ್ದರೆ ತಕ್ಷಣವೇ ಚುಕ್ತಾ ಮಾಡಬೇಕು. ಕೋವಿಡ್‌ ಯೋಧರಾಗಿ ಕೆಲಸ ಮಾಡುತ್ತಿರುವ ಯಾರವೇತನವೂ ತಡವಾಗಬಾರದು ಎಂದು ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿದರು.

Advertisement

ಕಾರ್ಯಪಡೆ ಸದಸ್ಯರಾದ ಸಚಿವರಾದ ಡಾ.ಕೆ.ಸುಧಾಕರ್‌,ಎಸ್‌.ಸುರೇಶ್‌ ಕುಮಾರ್‌, ಸಿ.ಸಿ.ಪಾಟೀಲ್‌ ಹಾಗೂ ಮುಖ್ಯಕಾರ್ಯದರ್ಶಿ ರವಿಕುಮಾರ, ಆರೋಗ್ಯ ಇಲಾಖೆ ಹೆಚ್ಚುವರಿಮುಖ್ಯ ಕಾರ್ಯದರ್ಶಿ ಜಾವೆದ್‌ ಆಖ್ತರ್‌ ಇದ್ದರು.ತಂತ್ರ ಬದಲಿಸಬೇಕು18ರಿಂದ 44 ವರ್ಷ ವಯಸ್ಸಿನ ಎಲ್ಲರಿಗೂ ವ್ಯಾಕ್ಸಿನೇಷನ್‌ಮಾಡಬೇಕು. ರಾಜ್ಯದಲ್ಲಿ 3.26 ಕೋಟಿ ಜನರಿಗೆ ಲಸಿಕೆನೀಡಬೇಕಾಗಿದ್ದು, ಇವರಿಗೆ ಎರಡು ಡೋಸ್‌ ನೀಡಲು6.52 ಕೋಟಿ ರೂ. ಅಗತ್ಯವಿದೆ. ಕೇಂದ್ರದಿಂದ 3 ಲಕ್ಷಡೋಸ್‌ ಕೋವಿಶೀಲ್ಡ್‌ ಬಂದಿದ್ದು, ಮೇ ಎರಡನೇ ವಾರಕ್ಕೆ15 ಲಕ್ಷ ಡೋಸ್‌ ಬರುತ್ತದೆ. ತಕ್ಷಣವೇ ಲಸಿಕೆಅಭಿಯಾನದ ಕಾರ್ಯತಂತ್ರವನ್ನು ಬದಲಿಸಬೇಕು.ಲಸಿಕೆಯನ್ನು ಯಾರಿಗೆ ನೀಡಬೇಕು ಎಂಬ ಹೊಸಮಾರ್ಗಸೂಚಿ ರೂಪಿಸಬೇಕಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next