Advertisement

ಉಪಚುನಾವಣಾ ರಣಕಣ:ಶಾಂತಿಯುತ ಮತದಾನ, ಗಣ್ಯರ ಹಕ್ಕು ಚಲಾವಣೆ  

09:58 AM Nov 03, 2018 | |

ಬೆಂಗಳೂರು: ಶಿವಮೊಗ್ಗ, ಬಳ್ಳಾರಿ, ಮಂಡ್ಯ ಲೋಕಸಭಾ ಕ್ಷೇತ್ರಗಳು ಮತ್ತು ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯ ಮತದಾನ ಶನಿವಾರ ಬಿರುಸಿನಿಂದ ನಡೆಯುತ್ತಿದ್ದು ಬೆಳಗ್ಗೆ 10 ಗಂಟೆಯವರೆಗೆ ಶಾಂತಿಯುತ ವಾತಾವರಣವಿರುವ ಬಗ್ಗೆ ವರದಿಯಾಗಿದೆ. 

Advertisement

ಶಿಕಾರಿಪುರದಲ್ಲಿ  ಮಾಜಿ ಸಿಎಂ ಯಡಿಯೂರಪ್ಪ ಅವರು ಕುಟುಂಬ ಸಮೇತರಾಗಿ ಹುಚ್ಚರಾಯ ಸ್ವಾಮಿ ದೇವಾಲಯ ಮತ್ತು ರಾಘವೇಂದ್ರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮತ ಕೇಂದ್ರಕ್ಕೆ ತೆರಳಿ ಹಕ್ಕು ಚಲಾಯಿಸಿದರು. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತ್ತು ಕುಟುಂಬ ಸದಸ್ಯರು ಜೊತೆಯಲ್ಲಿದ್ದರು. 

ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ. 

ಕೆಲವೆಡೆ ಮತ ಯಂತ್ರಗಳು ಕೈಕೊಟ್ಟ ಬಗ್ಗೆ ವರದಿಯಾಗಿದೆ. ಕೆಲವೆಡೆ ಗೊಂದಲ ಸೃಷ್ಟಿಯಾಗಿದೆ. 

ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 

Advertisement

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next