Advertisement

ಮಿನಿ ಫೈಟ್:ಎರಡೂ ಕ್ಷೇತ್ರದಲ್ಲಿ ಮತದಾನ ಆರಂಭ; ಅಮೂಲ್ಯ, ಕೃಷ್ಣಮೂರ್ತಿ, ರಾಜೇಶ್ ಗೌಡ ವೋಟಿಂಗ್

12:16 PM Nov 03, 2020 | keerthan |

ಬೆಂಗಳೂರು: ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷಗಳಾದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ರಾಜಕೀಯ ಜಿದ್ದಾಜಿದ್ದಿ ಜತೆಗೆ ಆಯಾ ಪಕ್ಷಗಳ ಮುಖಂಡರು ತಮ್ಮ ಪ್ರತಿಷ್ಠೆಯನ್ನು ಪಣಕ್ಕಿಟ್ಟಿರುವ ಶಿರಾ ಮತ್ತು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಆರಂಭವಾಗಿದೆ.

Advertisement

ಬೆಳಿಗ್ಗೆ ಏಳು ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಕೋವಿಡ್ ಕಾಲದಲ್ಲಿ ನಡೆಯುತ್ತಿರುವ ಚುನಾವಣೆಯಾದ ಕಾರಣ ಎಲ್ಲಾ ಸೂಕ್ತ ಮುಂಜಾಗೃತೆ ವಹಿಸಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಶಿರಾ ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ಕಣದಲ್ಲಿದ್ದು, ಮತದಾನಕ್ಕೆ 330 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 801 ಇವಿಎಂ ಮತ್ತು ವಿವಿಪ್ಯಾಟ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ 678 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನಕ್ಕೆ 1,458 ಇವಿಎಂ-ವಿವಿಪ್ಯಾಟ್‌ಗಳನ್ನು ಬಳಸಲಾಗುತ್ತದೆ. 9,515 ಚುನಾವಣ ಸಿಬಂದಿಯನ್ನು ನಿಯೋಜಿಸಲಾಗಿದೆ.

ರಾಜರಾಜೇಶ್ವರಿ ನಗರದ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಅವರು ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದರು. ಜ್ಞಾನ ಭಾರತಿ ವಾರ್ಡ್ ನ ಎಚ್ ಎಂ ಆರ್ ಶಾಲೆ ಮತಗಟ್ಟೆ ಯಲ್ಲಿ ವಿ.ಕೃಷ್ಣಮೂರ್ತಿ ಮತದಾನ ಮಾಡಿದರು.

ಇದನ್ನೂ ಓದಿ:ಬಿಹಾರದಲ್ಲಿಂದು ಎರಡನೇ ಹಂತದ ಮತದಾನ: 17 ಜಿಲ್ಲೆಗಳ 94 ಕ್ಷೇತ್ರಗಳಿಗೆ ವೋಟಿಂಗ್

Advertisement

ನಟಿ ಅಮೂಲ್ಯ ಅವರು ಕುಂಟುಂಬವ ಸಮೇತ ಆಗಮಿಸಿ ಆರ್.ಆರ್. ನಗರದ ಬಿಇಟಿ ಕಾನ್ವೆಂಟ್ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ನಟಿ ಅಮೂಲ್ಯ ಅವರು ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚುನಾವಣೆ ಪ್ರಚಾರ ಮಾಡಿದ್ದರು.

ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಇಂದು ಮತದಾನ ನಡೆಸಿದರು. ರಾಜೇಶ್ ಗೌಡ ಅವರು ಇದು ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಬಿಜೆಪಿ ಟಿಕೆಟ್ ನಲ್ಲಿ ಸ್ಪರ್ಧೆ ನಡೆಸುತ್ತಿದ್ದಾರೆ.

ಆರ್.ಆರ್. ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತ ಚಲಾಯಿಸಿದ್ದು, ಜ್ಞಾನ ಅಭ್ಯರ್ಥಿ ವಾರ್ಡ್ ನಲ್ಲಿ ಮತದಾನ ಮಾಡಿದರು. ಮತದಾನಕ್ಕೂ ಮೊದಲು ದೇವಸ್ಥಾನಗಳಿಗೆ ಭೇಟಿ ನೀಡಿದ ಕುಸುಮಾ ನಂತರ ಮತ ಚಲಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next