Advertisement

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

12:43 AM Oct 18, 2024 | Team Udayavani |

ಬೆಂಗಳೂರು: ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಗುರುವಾರ ಬೆಂಗಳೂರಿನಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

Advertisement

ಆ ಬಳಿಕ ಮಾಧ್ಯಮದ ಜತೆ ಮಾತನಾಡಿ, ಯಡಿಯೂರಪ್ಪ ಅವರ ಜತೆ ಶಿಗ್ಗಾವಿ ಕ್ಷೇತ್ರದ ಬಗ್ಗೆಯೂ ಚರ್ಚೆ ನಡೆದಿದೆ. ಚುನಾವಣೆಗೆ ಏನೇನು ತಯಾರಿ ಮಾಡಿದ್ದೇವೆ ಎಂದು ಕೇಳಿದರು.

ಎಲ್ಲ ಸಿದ್ಧತೆ ಮಾಡಿಕೊಂಡಿರುವ ಬಗ್ಗೆ ಹೇಳಿದ್ದೇನೆ. ಅಭ್ಯರ್ಥಿ ಆಯ್ಕೆ ಬಗ್ಗೆಯೂ ಚರ್ಚೆ ಆಗಿದೆ. ಅಂತಿಮವಾಗಿ ಯಾರಿಗೆ ಟಿಕೆಟ್‌ ಕೊಟ್ಟರೂ ಗೆಲ್ಲಿಸಬೇಕು ಎಂದು ಮಾತುಕತೆ ಆಗಿದೆ. ದಿಲ್ಲಿಗೆ ಅ. 19ರ ಅನಂತರ ಹೋಗುತ್ತೇನೆ. ಎಲ್ಲ 3 ಕ್ಷೇತ್ರಗಳಲ್ಲೂ ಗೆಲ್ಲಲು ಪ್ರಯತ್ನ ಮಾಡೋಣ ಅಂದಿದ್ದಾರೆ ಎಂದು ಹೇಳಿದರು.

ಚನ್ನಪಟ್ಟಣ ಟಿಕಟ್‌ ಕುರಿತು ಕೇಳಿದ ಪ್ರಶ್ನೆಗೆ ಚನ್ನಪಟ್ಟಣದ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹಾಗೂ ನಮ್ಮ ಪಕ್ಷದ ಹೈಕಮಾಂಡ್‌ ಸೇರಿ ತೀರ್ಮಾನ ಮಾಡುತ್ತಾರೆ ಎಂದಷ್ಟೇ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next