Advertisement

By Election: ಬಿಜೆಪಿ ಉಸ್ತುವಾರಿಯಾಗಿ ಕೋಟ ಶ್ರೀನಿವಾಸ ಪೂಜಾರಿ

12:25 AM Oct 04, 2024 | Team Udayavani |

ಬೆಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಅ. 21ರಂದು ನಡೆಯಲಿರುವ ಉಪ ಚುನಾವಣೆಯ ಉಸ್ತುವಾರಿಯನ್ನಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆದೇಶಿಸಿದ್ದಾರೆ.

Advertisement

ಇದೇ ಕ್ಷೇತ್ರದಿಂದ ಗೆದ್ದು ವಿಧಾನ ಪರಿಷತ್ತಿನ ವಿಪಕ್ಷದ ನಾಯಕರೂ ಆಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿ-ಚಕ್ಕಮಗಳೂರು ಸಂಸತ್‌ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದರಿಂದ ಮೇಲ್ಮನೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದ ತೆರವಾದ ಸ್ಥಾನಕ್ಕೆ ನಡೆಯುತ್ತಿರುವ ಉಪಚುನಾವಣೆಗೆ ಅವರೇ ಬಿಜೆಪಿ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಈಗಾಗಲೇ ಕಿಶೋರ್‌ ಕುಮಾರ್‌ ಪುತ್ತೂರು ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಿದ್ದು, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಸಹ ಉಸ್ತುವಾರಿಗಳಾಗಿ ಶಾಸಕರಾದ ರಾಜೇಶ್‌ ನಾಯ್ಕ ಉಳಿಪ್ಪಾಡಿಗುತ್ತು ಮತ್ತು ಪ್ರತಾಪಸಿಂಹ ನಾಯಕ್‌ ಅವರನ್ನು ನೇಮಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next