Advertisement

ಅಭ್ಯರ್ಥಿ ತೀರ್ಮಾನ ಮಾಡಿಲ್ಲ: ಡಿಕೆಶಿ

12:59 AM Oct 04, 2020 | mahesh |

ಬೆಳಗಾವಿ: ಶಿರಾ ಮತ್ತು ಆರ್‌.ಆರ್‌.ನಗರ ಉಪ ಚುನಾವಣೆಗೆ ಅಭ್ಯರ್ಥಿಗಳ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಹೇಳಿದರು.

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಅವರು ಎಲ್ಲರ ಜತೆ ಸಭೆ ಮಾಡಿ ಸಂಭಾವ್ಯರ ಹೆಸರು ಶಿಫಾರಸು ಮಾಡುತ್ತಾರೆ. ಅನಂತರ ಪ್ರಮುಖರು ಚರ್ಚಿಸುತ್ತೇವೆ ಎಂದರು. ಆರ್‌.ಆರ್‌.ನಗರ ಕ್ಷೇತ್ರದಲ್ಲಿ ದಿ| ಡಿ.ಕೆ. ರವಿ ಪತ್ನಿಗೆ ಟಿಕೆಟ್‌ ನೀಡಲು ಕೆಲವರು ಶಿಫಾರಸು ಮಾಡಿದ್ದಾರೆ. ಅವರ ತಂದೆಯವರು ಈ ಹಿಂದೆ ನಮ್ಮ ಪಕ್ಷ ಬಿಟ್ಟು ಹೋಗಿದ್ದರು. ಇದರ ಬಗ್ಗೆ ಇನ್ನೂ ಚರ್ಚಿಸಿಲ್ಲ. ಈ ಕ್ಷೇತ್ರಕ್ಕೆ ಬಾಲಕೃಷ್ಣ, ಎಂ. ಶ್ರೀನಿವಾಸ ಬಾಬು ಸೇರಿ ಏಳೆಂಟು ಜನ ಆಕಾಂಕ್ಷಿಗಳಿದ್ದಾರೆಂದು ಹೇಳಿದರು.

ಮುನಿರತ್ನರಿಗೆ ಬಿಜೆಪಿ ಟಿಕೆಟ್‌ ನೀಡದಿದ್ದರೆ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲಾಗು ವುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಾರ್ಟಿಗೆ ಯಾರು ಬೇಕಾದರೂ ಅರ್ಜಿ ಕೊಡಬಹುದು. ಅರ್ಜಿಗಳೆಲ್ಲ ಬರಲಿ, ಅನಂತರ ಚರ್ಚಿಸುತ್ತೇವೆ. ಶಿರಾ ಕ್ಷೇತ್ರದಲ್ಲಿ ಎಲ್ಲರೂ ಸೇರಿ ಒಂದು ಅಭಿಪ್ರಾಯಕ್ಕೆ ಬಂದಿದ್ದಾರೆ. ಅವರು ಕಳಿಸಿದ ಅಭ್ಯರ್ಥಿ ಹೆಸರನ್ನು ದಿಲ್ಲಿಗೆ ಶಿಫಾರಸು ಮಾಡಲಾಗುವುದು ಎಂದರು.
ನಟಿ ಅನುಶ್ರೀ ಅವರ ಜತೆ ಕೆಲವು ಪ್ರಭಾವಿಗಳ ನಂಟು ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ನಶೆ-ಗಿಶೆ ಎಲ್ಲ ಗೊತ್ತಿಲ್ಲ, ನಟಿಯರನ್ನು ಬಿಟ್ಟು ಬೇರೆ ಯಾರೂ ಡ್ರಗ್ಸ್‌ ತಗೊಂಡಿಲ್ವಾ? ಮಾಧ್ಯಮದಲ್ಲಿ ಕೇವಲ ಸಿನೆಮಾ ಉದ್ಯಮದವರನ್ನು ನೋಡಿ ಆಶ್ಚರ್ಯವಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next