Advertisement

By-Election: ಚನ್ನಪಟ್ಟಣ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ: ಎಚ್‌ಡಿಕೆ

01:39 AM Oct 11, 2024 | Team Udayavani |

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವಿಷಯದಲ್ಲಿ ಕ್ಷೇತ್ರ ಬಿಟ್ಟುಕೊಡುವ ಯಾವ ಒಪ್ಪಂದವೂ ಆಗಿಲ್ಲ. ನಿಖಿಲ್‌ ಕುಮಾರಸ್ವಾಮಿಯನ್ನು ಕಣಕ್ಕಿಳಿಸುವ ಬಗ್ಗೆಯೂ ನಾನು ಇಲ್ಲಿಯವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.

Advertisement

ಸುದ್ದಿಗಾರರ ಜತೆ ಮಾತನಾಡಿ, ಕ್ಷೇತ್ರ ಪ್ರವಾಸ ಮಾಡಿ ಕಾರ್ಯಕರ್ತರು, ಜನರ ಅಭಿಪ್ರಾಯ ತಿಳಿಯುತ್ತಿದ್ದೇನೆ. ಅಂತಿಮವಾಗಿ ಬಿಜೆಪಿ-ಜೆಡಿಎಸ್‌ ಮುಖಂಡರು ಒಟ್ಟಾಗಿ ಚರ್ಚಿಸಿ ಗೆಲ್ಲುವ ಅಭ್ಯರ್ಥಿಯನ್ನು ಘೋಷಿಸುತ್ತೇವೆ. ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನನ್ನ ಗುರಿ ಎಂದರು.

ಲೋಕಸಭೆಗೆ ನಿಲ್ಲಲು ಹೇಳಿದ್ದೆ
ಪ್ರಾರಂಭದಲ್ಲೇ ಯೋಗೇಶ್ವರ್‌ ಅವರಿಗೆ ಲೋಕಸಭೆಗೆ ಸ್ಪರ್ಧಿಸುವಂತೆ ಹೇಳಿದ್ದೆ. ಆದರೆ ಅಮಿತ್‌ಶಾ ಕರೆ ಮಾಡಿ, ಡಾ| ಮಂಜುನಾಥ್‌ ಅವರನ್ನು ಸ್ಪರ್ಧೆಗೆ ಒಪ್ಪಿಸಿ ಎಂದು ತಿಳಿಸಿದ ಹಿನ್ನೆಲೆಯಲ್ಲಿ ಅವರನ್ನು ಕಣಕ್ಕಿಳಿಸಲಾಯಿತು ಎಂದರು. ಚನ್ನಪಟ್ಟಣ ಟಿಕೆಟ್‌ ವಿಚಾರವಾಗಿ ಯೋಗೇಶ್ವರ್‌ ಒಂದು ಬಾರಿ ನನ್ನನ್ನು ಭೇಟಿ ಮಾಡಿದ್ದರು. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದೆ. ಅನಂತರ ನನ್ನ ಬಳಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next