Advertisement

BY Election: ಪಕ್ಷ ಸಂಘಟನೆ ಗುರಿ: ನಿಖಿಲ್‌ ಕುಮಾರಸ್ವಾಮಿ

12:11 AM Oct 19, 2024 | Team Udayavani |

ಮಂಡ್ಯ: ಪಕ್ಷ ಸಂಘಟನೆ ಮೇಲೆ ಆಸಕ್ತಿಯಿದ್ದು ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಚನ್ನಪಟ್ಟಣ ಸೇರಿ 3 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಹಿರಿಯ ನಾಯಕರು ಚರ್ಚೆ ನಡೆಸಿ ತೀರ್ಮಾನಿಸುತ್ತಾರೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸುದ್ದಿಗಾರರಲ್ಲಿ ಹೇಳಿದರು.

Advertisement

ಚನ್ನಪಟ್ಟಣ ಉಪಚುನಾವಣೆ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ-ಜೆಡಿಎಸ್‌ ಸಮನ್ವಯ ಕ್ಕಾಗಿ ಅ. 19ರಂದು ಶಿಗ್ಗಾವಿ, ಸಂಡೂರಿಗೆ ಭೇಟಿ ಕೊಡುತ್ತಿದ್ದೇನೆ. 3 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆಗೆ ಬಿಜೆಪಿ, ಜೆಡಿಎಸ್‌ ನಾಯಕರು ಕೂತು ಚರ್ಚೆ ಮಾಡುತ್ತಾರೆ. ನಾಳೆ ಬಿ.ಎಸ್‌. ಯಡಿಯೂರಪ್ಪ, ವಿಜಯೇಂದ್ರರೊಂದಿಗೆ ಚರ್ಚೆ ಸಾಧ್ಯತೆ ಇದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next